'ಭಾರತ್‍ ಜೋಡೋ' ಪಾದಯಾತ್ರೆ: ಮೈಸೂರು ನಗರಕ್ಕೆ ಆಗಮಿಸಿದ ರಾಹುಲ್‍ ಗಾಂಧಿಗೆ ಅದ್ದೂರಿ ಸ್ವಾಗತ

Update: 2022-10-02 16:01 GMT

ಮೈಸೂರು: ಭಾರತ್‍ ಜೋಡೋ ಪಾದಯಾತ್ರೆಗೆ ಅಭೂತ ಪೂರ್ವ ಬೆಂಬಲ ವ್ಯಕ್ತವಾಗಿದ್ದು ಮೂರನೇ ದಿನವಾದ ರವಿವಾರ ಮೈಸೂರುನಗರಕ್ಕೆ ಆಗಮಿಸಿ ರಾಹುಲ್‍ ಗಾಂಧಿಗೆ ಅದ್ದೂರಿ ಸ್ವಾಗತ ಕೋರಲಾಯಿತು.

ಮೈಸೂರು ಜಿಲ್ಲೆಗೆ ನಿನ್ನೆ ಆಗಮಿಸಿದ್ದ ರಾಹುಲ್‍ ಗಾಂಧಿ ತಾಂಡವಪುರ ಬಳಿ ವಾಸ್ತವ್ಯ ಹೂಡಿದ್ದರು. ರವಿವಾರ ಮೈಸೂರು ಜಿಲ್ಕೆ ನಂಜನಗೂಡು ತಾಲ್ಲೂಕು ಬದನವಾಳು ಗ್ರಾಮದಲ್ಲಿ ಗಾಂಧಿ ಜಯಂತಿ ಆಚರಣೆಯಲ್ಲಿ ಭಾಗವಹಿಸಿ ಕಡಕೊಳದ ಭೀರೇಶ್ವರ ಕಲ್ಯಾಣ ಮಂಟಪದಿಂದ ಸಂಜೆ 4.30 ಗಂಟೆ ಸಮಯದಲ್ಲಿ ಪಾದಯಾತ್ರೆ ಆರಂಭಿಸಿದರು.

ಪಾದಯಾತ್ರೆ ಯುದ್ಧಕ್ಕೂ ಕಾಂಗ್ರೆಸ್ ಕಾರ್ಯಕರ್ತರು, ಸಾರ್ವಜನಿಕರು ಹೆಜ್ಜೆ ಹಾಕಿದರು. ನಂಜನಗೂಡು-ಮೈಸೂರು ರಾಷ್ಟ್ರೀಯ ಹೆದ್ದಾರಿ ರಸ್ತೆಯ ಎರಡೂ ಬದಿಗಳಲ್ಲಿ ಜನರುಕಿಕ್ಕಿರಿದು ತುಂಬಿದ್ದರು.

ಮೈಸೂರು ನಗರ ಪ್ರವೇಶಿಸುತ್ತಿದ್ದಂತೆ ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾರ ,ಶಾಲು, ಮೈಸೂರು ಪೇಟ ಹಾಕಿ ಅದ್ದೂರಿ ಸ್ವಾಗತ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News