ಶಿಕಾರಿಪುರ: ಶಿರಾಳಕೊಪ್ಪದಲ್ಲಿ ಭೂಮಿ ಕಂಪಿಸಿದ ಅನುಭವ

Update: 2022-10-06 04:34 GMT
ಸಾಂದರ್ಭಿಕ ಚಿತ್ರ

ಶಿವಮೊಗ್ಗ, ಅ.6: ಶಿಕಾರಿಪುರ ತಾಲೂಕು ಶಿರಾಳಕೊಪ್ಪದಲ್ಲಿ ಗುರುವಾರ ಬೆಳಗಿನ ಜಾವ ಭೂಮಿ ಕಂಪಿಸಿದ ಅನುಭವವಾಗಿದ್ದು, ಇದರಿಂದ ಭಯಭೀತರಾದ ಜನರು ಮನೆಯಿಂದ ಹೊರಗೋಡಿ ಬಂದ ಘಟನೆ ನಡೆದಿದೆ.

ಬೆಳಗಿನ ಜಾವ 3:55ರ ಹೊತ್ತಿಗೆ ಭೂಮಿ ಎರಡು ಬಾರಿ ಕಂಪಿಸಿದ ಅನುಭವವಾಗಿದೆ ಎಂದು ಹೇಳಲಾಗುತ್ತಿದೆ. ಶಿರಾಳಕೊಪ್ಪ ಪಟ್ಟಣ ಮತ್ತು ಸುತ್ತಮುತ್ತಲ ಒಂದು ಕಿ.ಮೀ. ಸುತ್ತಮುತ್ತಲು ಈ ಅನುಭವವಾಗಿರುವುದಾಗಿ ಇಲ್ಲಿನ ಜನರು ತಿಳಿಸಿದ್ದಾರೆ.

ಭೂಮಿ ಕಂಪನದ ಅನುಭವ ಆಗುತ್ತಿದ್ದಂತೆ ಜನರು ಮನೆಯಿಂದ ಹೊರಗೆ ಬಂದಿದ್ದಾರೆ. ಕೆಲವರು ಜೋರಾದ ಶಬ್ದ ಕೇಳಿಬಂದಿರುವುದಾಗಿಯೂ ತಿಳಿಸಿದ್ದಾರೆ.  

ಇನ್ನು ಈ ಘಟನೆ ಕುರಿತು  ಮಾತನಾಡಿದ ತಹಶೀಲ್ದಾರ್ ಕವಿರಾಜ್, ಶಿರಾಳಕೊಪ್ಪ ಪಟ್ಟಣದ ಒಂದು ಕಿ.ಮೀ. ಸುತ್ತಳತೆಯಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಜನರು ತಿಳಿಸಿದ್ದಾರೆ. ಇದು ಭೂಕಂಪನವೋ ಅಥವಾ ಕಂಪನಕ್ಕೆ ಬೇರೇನಾದರೂ ಕಾರಣವೋ ಎಂಬುದರ ಕುರಿತು ಇನ್ನಷ್ಟೇ ತಿಳಿದು ಬರಬೇಕಿದೆ. ಈ ಕುರಿತು ಜಿಲ್ಲಾಧಿಕಾರಿ ಅವರಿಗೆ ತಿಳಿಸಿದ್ದೇವೆ. ಏನಾಗಿದೆ ಎಂಬುದರ ಕುರಿತು ಭೂಗರ್ಭ ಶಾಸ್ತ್ರಜ್ಞರ ಅಧಿಕೃತ ವರದಿ ಬರಬೇಕಿದೆ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News