ಮಂಡ್ಯ: ಭಾರತ್‌ ಜೋಡೊ ಯಾತ್ರೆಯಲ್ಲಿ ಸೋನಿಯಾ ಗಾಂಧಿ ಭಾಗಿ

Update: 2022-10-06 05:08 GMT

ಮಂಡ್ಯ: 2 ದಿನ ವಿಶ್ರಾಂತಿ ಬಳಿಕ ಕರ್ನಾಟಕದಲ್ಲಿ 5ನೇ ದಿನದ ಭಾರತ್ ಜೋಡೋ ಯಾತ್ರೆ  ಮತ್ತೆ ಇಂದಿನಿಂದ ಆರಂಭವಾಗಿದೆ. 

ಮಂಡ್ಯದ ಬೆಳ್ಳಾಳೆಯಿಂದ ಪ್ರಾರಂಭವಾದ ಪಾದಯಾತ್ರೆಯಲ್ಲಿ ರಾಹುಲ್ ಗಾಂಧಿ ಜೊತೆ ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ ಕೆಲಹೊತ್ತು ಹೆಜ್ಜೆ ಹಾಕಿದರು. 

ಅ.3ರಂದೇ ರಾಜ್ಯಕ್ಕೆ ಬಂದಿದ್ದ ಸೋನಿಯಾ ಗಾಂಧಿ, ಎಚ್.ಡಿ.ಕೋಟೆ ತಾಲೂಕಿನ ಬೀರಂಬಳ್ಳಿಯ ಆರೆಂಜ್‌ ಕೌಂಟಿ ರೆಸಾರ್ಟ್‌ನಲ್ಲಿ 2 ದಿನ ವಾಸ್ತವ್ಯ ಹೂಡಿದ್ದರು. 

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನ ಪರಿಷತ್​ ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಸೇರಿದಂತೆ ಸಾವಿರಾರು ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. 

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News