ಬೆಂಗಳೂರು | ಮನೆ ತೆರವಿಗೆ ವಿರೋಧ: ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ದಂಪತಿ

Update: 2022-10-12 07:10 GMT

ಬೆಂಗಳೂರು ಅ. 12: ಬಿಬಿಎಂಪಿಯಿಂದ  ಮನೆ ತೆರವು ವಿರೋಧಿಸಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ದಂಪತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಕೆ.ಆರ್ ಪುರ ಸಮೀಪದ ಗಾಯತ್ರಿ ಲೇಔಟ್‌ನಲ್ಲಿ ನಡೆದಿದೆ.

ರಾಜಕಾಲುವೆ ಒತ್ತುವರಿ ಮಾಡಿಕೊಂಡ ಆರೋಪದ ಮೇಲೆ ಬಿಬಿಎಂಪಿ ಅಧಿಕಾರಿಗಳು ಗಾಯತ್ರಿ ಲೇಔಟ್‌ನ ಮನೆಗಳ ತೆರವಿಗೆ ಇಂದು ಮುಂದಾಗಿದ್ದರು. ಈ ವೇಳೆ  ಮನೆ ಗೋಡೆ ತೆರವು ಮಾಡಿದರೆ ಆತ್ಮಹತ್ಯೆ ಮಾಡಿಕೊಳ್ಳವುದಾಗಿ ಹೇಳಿ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ದಂಪತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಸ್ಥಳಕ್ಕೆ ಸಿಎಂ ಬರಬೇಕು ಎಂದು ಪಟ್ಟು: ''ಈ ಮನೆ ಕಟ್ಟುವಾಗ ಬಿಬಿಎಂಪಿ ಅಧಿಕಾರಿಗಳು ಅನುಮತಿ ಕೊಟ್ಟಿದ್ದಾರೆ. 20 ವರ್ಷದಿಂದ ಇಲ್ದೇ ಇರೋ ರಾಜಕಾಲುವೆ ಈಗೆಲ್ಲಿಂದ ಬಂತು ? ನನ್ನ ಮನೆಯನ್ನು ಯಾವುದೇ ಕಾರಣಕ್ಕೂ ಒಡೆಯಕ್ಕೆ ಬಿಡಲ್ಲ. ಮುಖ್ಯಮಂತ್ರಿಗಳು ಸ್ಥಳಕ್ಕೆ ಬರಬೇಕು'' ಎಂದು ಪಟ್ಟು ಹಿಡಿದಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News