ಭಾರತ್ ಜೋಡೊ ಯಾತ್ರೆ ವೇಳೆ ವಿದ್ಯುತ್ ಅವಘಡ; ನಾಲ್ವರಿಗೆ ಗಾಯ

Update: 2022-10-16 12:31 GMT

ಬಳ್ಳಾರಿ, ಅ. 16; ರಾಹುಲ್‍ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೊ ಯಾತ್ರೆ ನಿನ್ನೆ ಬಳ್ಳಾರಿ ನಗರ ಪ್ರವೇಶಿಸಿದ್ದು,  ಇಂದು ಗ್ರಾಮಾಂತರ ಕ್ಷೇತ್ರದಲ್ಲಿ ಮುಂದುವರಿಯಿತು.

ಪಾದಯಾತ್ರೆ ಬಳ್ಳಾರಿ ತಾಲೂಕಿನ ಹೊಸ ಮೋಕಾ ಬಳಿ ಸಾಗುತ್ತಿದ್ದ ವೇಳೆ ವಿದ್ಯುತ್ ಅವಘಡ ಸಂಭವಿಸಿ, ನಾಲ್ವರು ಗಾಯಗೊಂಡ ಘಟನೆ ವರದಿಯಾಗಿದೆ. 

ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ನಾಲ್ವರಿಗೆ ವಿದ್ಯುತ್ ತಗುಲಿದ್ದು, ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ರಾಹುಲ್‌ ಗಾಂಧಿ ಭೇಟಿ: ಗಾಯಾಳುಗಳನ್ನು ರಾಹುಲ್‌ ಗಾಂಧಿ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಈ ವೇಳೆ ಶಾಸಕ ಬಿ.ಎಲ್ ನಾಗೇಂದ್ರ, ಕಾಂಗ್ರೆಸ್ ಮುಖಂಡರು ಇದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News