ಮಡಿಕೇರಿ: ವಿದ್ಯಾರ್ಥಿ ಆತ್ಮಹತ್ಯೆ

Update: 2022-10-24 15:05 GMT

ಮಡಿಕೇರಿ ಅ.24 : ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುಬ ಘಟನೆ ದಕ್ಷಿಣ ಕೊಡಗಿನ ಬಾಳೆಲೆ ಗ್ರಾಮದಲ್ಲಿ ವರದಿಯಾಗಿದೆ. 

ಗೋಣಿಕೊಪ್ಪದ ವಿದ್ಯಾಸಂಸ್ಥೆಯೊಂದರಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ನಿಹಾಲ್(14) ಮೃತ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಈತ ಬಾಳೆಲೆ ಗ್ರಾಮದ ಟಿ.ಲೆಹರ್ ಹಾಗೂ ಸುಷ್ಮಾ ದಂಪತಿ ಪುತ್ರ. 

ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News