ಒಮೈಕ್ರಾನ್ ಬಗ್ಗೆ ರಾಜ್ಯದಲ್ಲಿ ಯಾವುದೇ ಆತಂಕವಿಲ್ಲ: ಸಚಿವ ಡಾ.ಕೆ.ಸುಧಾಕರ್

Update: 2022-10-27 15:20 GMT

ಮೈಸೂರು,ಅ.27: 'ಒಮೈಕ್ರಾನ್ ರೂಪಾಂತರ ಹೊಸ ತಳಿ ಪತ್ತೆ ವಿಚಾರ ಸಂಬಂಧ ರಾಜ್ಯದಲ್ಲಿ ಯಾವುದೇ ಆತಂಕವಿಲ್ಲ, ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ' ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. 

ಮೈಸೂರು ಜಿಲ್ಲಾ ಪಂಚಾಯಿತ್ ಸಭಾಂಗಣದಲ್ಲಿ ಗುರುವಾರ ಆರೋಗ್ಯ ಸಚಿವಡಾ ಕೆ ಸುಧಾಕರ್ ಅವರು ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ಕೊಡಗು, ದಕ್ಷಿಣಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳ ಆರೋಗ್ಯಾಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.

ಓಮಿಕ್ರಾನ್‍ರೂಪಾಂತರ ಹೊಸ ತಳಿ ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಚಿವ ಸುಧಾಕರ್,  'ರಾಜ್ಯದಲ್ಲಿ ಯಾವುದೇ ಆತಂಕವಿಲ್ಲ, ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ. ಮಾಸ್ಕ್ ಕಡ್ಡಾಯದ ಬಗ್ಗೆ ಇನ್ನೂ ಯಾವುದೇ ನಿರ್ಧಾರವಾಗಿಲ್ಲ. ಮಹಾರಾಷ್ಟ್ರದಲ್ಲಿ ಒಂದು ಪ್ರಕರಣ ಪತ್ತೆಯಾಗಿದ್ದು, ಅಮೆರಿಕಾದಲ್ಲಿ ಈ ಪ್ರಕರಣ ಹೆಚ್ಚಾಗಿದೆ.ಈ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಿಗೆ ಮಾರ್ಗಸೂಚಿ ನೀಡಲಾಗಿದೆ.ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.ಆದಷ್ಟು ಬೇಗ ಜನರುಕೂಡ ಮೂರನೇಡೋಸ್ ಪಡೆಯುವುದು ಒಳ್ಳೆಯದು' ಎಂದರು.

Similar News