ಪಿಎಸ್ಐ ನೇಮಕಾತಿ ಹಗರಣ; ಆರೋಪಿ ಸುಪ್ರಿಯಾ ಮಲ್ಲಿಕಾರ್ಜುನ ವಶಕ್ಕೆ
Update: 2022-11-03 04:41 GMT
ಕಲಬುರಗಿ: ಪಿಎಸ್ಐ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಜಿಲ್ಲೆಯ ಜೇವರ್ಗಿ ತಾಲೂಕಿನ ಹಿಪ್ಪರಗಾ ಎಸ್. ಎನ್ ಗ್ರಾಮದ ನಿವಾಸಿ ಸುಪ್ರಿಯಾ ಮಲ್ಲಿಕಾರ್ಜುನ ಹುಂಡೆಕಾರ್ ಎಂಬುವರನ್ನು ವಶಕ್ಕೆ ಪಡೆದಿದ್ದು, ಬ್ಲೂಟೂತ್ ಬಳಸಿ ಅಕ್ರಮವಾಗಿ ಪಿಎಸ್ಐ ನೇಮಕ ಪರೀಕ್ಷೆ ಬರೆದಿರುವ ಆರೋಪದಡಿ ಈಕೆ ವಿರುದ್ಧ ದೂರು ದಾಖಲಾಗಿತ್ತು.
ಇನ್ನು ಪ್ರಕರಣದಲ್ಲಿ ತೆಲೆ ಮೆರೆಸಿಕೊಂಡ ಉಳಿದ ಆರೋಪಿಗಳಿಗಾಗಿ ಸಿಐಡಿ ಶೋಧ ಕಾರ್ಯ ಮುಂದುವರಿಸಿದೆ ಎಂದು ತಿಳಿದು ಬಂದಿದೆ.