ಹಿಮಾಚಲಪ್ರದೇಶದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕ ಸಂಹಿತೆ ಜಾರಿ: ಪ್ರಣಾಳಿಕೆಯಲ್ಲಿ ಬಿಜೆಪಿ ಭರವಸೆ

Update: 2022-11-06 06:10 GMT

ಶಿಮ್ಲಾ: ಹಿಮಾಚಲ ಪ್ರದೇಶದ ಮತದಾನಕ್ಕೆ ಒಂದು ವಾರದ ಮೊದಲು ಆಡಳಿತಾರೂಢ ಬಿಜೆಪಿಯು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ  ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರುವುದಾಗಿ ರವಿವಾರ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ.

ಮುಂದಿನ ತಿಂಗಳು ಮತದಾನ ನಡೆಯಲಿರುವ ಗುಜರಾತ್‌ನಲ್ಲೂ ಇದೇ ರೀತಿಯ ಭರವಸೆಯನ್ನು ನೀಡಲಾಗಿದೆ.  ಈ ಕ್ರಮವನ್ನು ಪ್ರತಿಪಕ್ಷಗಳು ಹಿಂದೂ ಬಹುಸಂಖ್ಯಾತರ ಮತಗಳನ್ನು ಹೆಚ್ಚಿಸುವ ಗಿಮಿಕ್ ಎಂದು ಟೀಕಿಸಿವೆ.

Similar News