ಜೆಡಿಎಸ್ ಸೇರ್ಪಡೆ ವಿಚಾರ: ರಮೇಶ್ ಜಾರಕಿಹೊಳಿ ಪ್ರತಿಕ್ರಿಯಿದ್ದು ಹೀಗೆ...

Update: 2022-11-19 09:19 GMT

ಬೆಳಗಾವಿ: ಯಾವುದೇ ಕಾರಣಕ್ಕೂ ನಾನು ಬಿಜೆಪಿ ಬಿಡಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.

ಶನಿವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಸೇರುತ್ತಾರೆ ಎಂಬುವುದು ಊಹಾಪೋಹ. ನನ್ನ ಮನಸಿಗೆ ಬೇಜಾರಾಗಿ ಒಂದು ವರ್ಷದಿಂದ ಮಾಧ್ಯಮದಿಂದ ದೂರವಿದ್ದೆ. ಅನಿವಾರ್ಯವಾಗಿ ಇಂದು ಒಂದೇ ಒಂದು ವಿಷಯ ಸ್ಪಷ್ಟಪಡಿಸುವೆ ಎಂದರು.

ಎ.ಡಿ.ಕುಮಾರಸ್ವಾಮಿ ಜೊತೆ ನಾನು ಮಾತನಾಡಿದ್ದು ನಿಜ. ನನಗೆ ಸುಳ್ಳು ಹೇಳುವ ಚಟವಿಲ್ಲ. ದಿನನಿತ್ಯ ಕುಮಾರಸ್ವಾಮಿ ನನ್ನ ಜೊತೆ ಫೋನ್‍ನಲ್ಲಿ ಟಚ್ ಇದ್ದಾರೆ. ಆದರೆ ನಾನು ಬಿಜೆಪಿ ಬಿಡುವ ಪ್ರಶ್ನೆ ಇಲ್ಲ ಎಂದರು. 

Similar News