ಕೆಪಿಟಿಸಿಎಲ್ ನೇಮಕಾತಿ ಹಗರಣ: ಮತ್ತೊಬ್ಬ ಆರೋ‍ಪಿ ಸೆರೆ, ಬಂಧಿತ ಸಂಖ್ಯೆ 35ಕ್ಕೆ

Update: 2022-12-14 15:01 GMT

ಬೆಂಗಳೂರು,ಡಿ.14: ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆ ಹಗರಣ ಪ್ರಕರಣ ಸಂಬಂದ ಬಂಧಿತ ಸಂಖ್ಯೆ ಬಂಧಿತರ ಸಂಖ್ಯೆ 35ಕ್ಕೆ ಏರಿದೆ.

ಪ್ರಕರಣ ಸಂಬಂಧ ಬುಧವಾರ ರಾಯಬಾಗ ತಾಲೂಕಿನ ಕೋಳಿಗುಡ್ಡ ಗ್ರಾಮದ ಸೋಮನಗೌಡ ಶಂಕರಗೌಡ ಪಾಟೀಲ(36) ಎಂಬಾತನನ್ನು ಬಂಧಿಸಲಾಗಿದೆ ಎಂದು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಈತ ಗದಗ ನಗರದ ಮುನ್ಸಿಪಲ್ ಪದವಿಪೂರ್ವ ಕಾಲೇಜಿನಲ್ಲಿ ಪರೀಕ್ಷಾ ಕೇಂದ್ರದಿಂದ ಪ್ರಶ್ನೆ ಪತ್ರಿಕೆಯನ್ನು ಬಹಿರಂಗ ಮಾಡುವಲ್ಲಿ ಪಾತ್ರ ಪ್ರಮುಖ ವಹಿಸಿದ್ದ ಎನ್ನುವ ಮಾಹಿತಿ ಇದೆ.ಇನ್ನೂ, ನಾಲ್ಕು ತಿಂಗಳಿಂದ ತಲೆಮರೆಸಿಕೊಂಡಿದ್ದ ಸೋಮನಗೌಡ ಶಂಕರಗೌಡ ಪಾಟೀಲನನ್ನು ಬಂಧಿಸುವಲ್ಲಿ ತನಿಖಾ ತಂಡ ಯಶಸ್ವಿಯಾಗಿದ್ದು, ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

Similar News