ಕೆಪಿಸಿಸಿ ಚುನಾವಣಾ ಸಮಿತಿ ಸದಸ್ಯರಾಗಿ ಯು.ಟಿ ಖಾದರ್ ನೇಮಕ

Update: 2022-12-14 18:09 GMT

ಬೆಂಗಳೂರು, ಡಿ. 13: ಮುಂಬರುವ 2023ರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನೂತನ ಚುನಾವಣಾ ಸಮಿತಿ ರಚನೆ ಮಾಡಿ ಎಐಸಿಸಿ ಆದೇಶ ಹೊರಡಿಸಿದ್ದು, ವಿಧಾನಸಭೆ ವಿಪಕ್ಷ ಉಪ ನಾಯಕ ಯು.ಟಿ ಖಾದರ್ (UT Khader) ಅವರನ್ನು ಸಮಿತಿ ಸದಸ್ಯರಾಗಿ ನೇಮಕ ಮಾಡಲಾಗಿದೆ. 

ಬುಧವಾರ ರಾತ್ರಿ ಈ ಸಂಬಂಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣು ಗೋಪಾಲ್ ಅವರು ಪಟ್ಟಿ ಪ್ರಕಟಿಸಿದ್ದು, ಯು.ಟಿ ಖಾದರ್ ಹಾಗೂ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಸೇರಿದಂತೆ  36 ಮಂದಿ ಕಾಂಗ್ರೆಸ್ ಮುಖಂಡರು ಸಮಿತಿಯಲ್ಲಿದ್ದಾರೆ.

Similar News