ಮಹಿಳೆಯರ ಏಳಿಗೆಗಾಗಿ ಒನಕೆ ಓಬವ್ವ ನಿಗಮ ರಚನೆ: ಸಿಎಂ ಬೊಮ್ಮಾಯಿ ಘೋಷಣೆ

Update: 2022-12-18 12:56 GMT

ಚಿತ್ರದುರ್ಗ, ಡಿ. 18:  ಒನಕೆ ಓಬವ್ವನವರ ಹೆಸರಿನಲ್ಲಿ ಮಹಿಳೆಯರಿಗಾಗಿ ವಿಶೇಷ ಕಾರ್ಯಕ್ರಮವನ್ನು ಮುಂದಿನ ಆಯವ್ಯಯದಲ್ಲಿ ರೂಪಿಸಿ, ಓಬ್ಬನದ ಹೆಸರಿನ ನಿಗಮವನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

ಅವರು ಇಂದು ವೀರವನಿತೆ ಓಬವ್ವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

''ಓಬವ್ವನವರ ಹೆಸರಿನಲ್ಲಿ ಮಹಿಳಾ ಕಾಲೇಜನ್ನು ಸ್ಥಾಪಿಸಲಾಗುವುದು. ಒನಕೆ ಓಬವ್ವ ಟ್ರಸ್ಟ್ ಹೆಸರಿನಲ್ಲಿ ಸಮುದಾಯಕ್ಕೆ 80 ಎಕರೆ ಜಮೀನನ್ನು ನೀಡಲು ಕ್ರಮ ಕೈಗೊಳ್ಳಲಾಗುವುದು. ಒನಕೆ ಓಬವ್ವನ ಜೀವನ ಸಾಧನೆಗಳ ಸಂಶೋಧನೆಗಾಗಿ ವಿಶ್ವವಿದ್ಯಾಲಯಲದಲ್ಲಿ ಅಧ್ಯಯನ ಪೀಠ ರಚಿಸಲಾಗುವುದು. ಸಮುದಾಯಕ್ಕೆ ಉದ್ಯೋಗ, ಭೂ ಒಡೆತನ ಸಮಸ್ಯೆಗಳಿಗೆ ಸೂಕ್ತ ಸಮಯದಲ್ಲಿ ನ್ಯಾಯ ಒದಗಿಸಲಾಗುವುದು'' ಎಂದರು.

ಶಿಕ್ಷಣ ಮತ್ತು ಉದ್ಯೋಗಕ್ಕೆ  ಪ್ರಾಶಸ್ತ್ಯ : ಕರ್ನಾಟಕದ ಬೆಳವಣಿಗೆಯಲ್ಲಿ ಎಲ್ಲ ಸಮುದಾಯದ ಕೊಡುಗೆ ಇದೆ. ಸಮುದಾಯಗಳ ಶಿಕ್ಷಣ ಮತ್ತು ಉದ್ಯೋಗಕ್ಕೆ  ಸರ್ಕಾರ ಒತ್ತು ನೀಡುತ್ತದೆ. ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗುವಂತೆ 100 ಅಂಬೇಡ್ಕರ್ ಹಾಸ್ಟೆಲ್ ಗಳು, 50 ಕನಕದಾಸ ಹಾಸ್ಟೆಲ್, ಉದ್ಯೋಗ ಸೃಷ್ಟಿಯಲ್ಲಿ ರಾಜ್ಯದ  224 ಕ್ಷೇತ್ರದಲ್ಲಿ 100 ಯುವಕರಿಗೆ ಸ್ವಯಂಉದ್ಯೋಗ ಯೋಜನೆ ಜಾರಿ ಮಾಡಲಾಗುತ್ತಿದೆ. ದುರ್ಬಲ ವರ್ಗಗಳ ಶಿಕ್ಷಣ, ಉದ್ಯೋಗ ಹಾಗೂ ಸಬಲೀಕರಣ ಮಾಡುವುದು ಸರ್ಕಾರದ ಧ್ಯೇಯವಾಗಿದೆ ಎಂದರು.

ಈ ಸಂದರ್ಭದಲ್ಲಿ ಶ್ರೀ ಬಸವ ನಾಗದೇವ ಸ್ವಾಮೀಜಿ, ಜ್ಞಾನ ಪ್ರಕಾಶ್ ಸ್ವಾಮೀಜಿ, ವಿಜಯ ಮಹಾಂತೇಶ ಸ್ವಾಮೀಜಿ, ಬಸವಲಿಂಗ ಮೂರ್ತಿ ಸ್ವಾಮೀಜಿ, ಶಾಸಕರಾದ ನೆಹರು ಒಲೆಕರ್,  ತಿಪ್ಪಾರೆಡ್ಡಿ, ಚಂದ್ರಪ್ಪ, ಗೂಳಿಹಟ್ಟಿ ಶೇಖರ್, ಪೂರ್ಣಿಮಾ, ಎನ್. ಮಹೇಶ್, ಚಲವಾದಿ ನಾರಾಯಣ ಸ್ವಾಮಿ, ನವೀನ್, ನಿವೃತ್ತ ಐ.ಎ. ಎಸ್ ಅಧಿಕಾರಿ ಶಿವರಾಮ್, ಮಾಜಿ ಸಚಿವೆ ಮೋಟಮ್ಮ, ಮೊದಲಾದವರು ಉಪಸ್ಥಿತರಿದ್ದರು.

Similar News