ವಿರೋಧದ ನಡುವೆಯೂ ಬೆಳಗಾವಿಯ ಸುವರ್ಣಸೌಧದಲ್ಲಿ ಸಾವರ್ಕರ್ ಭಾವಚಿತ್ರ ಅನಾವರಣ

Update: 2022-12-19 08:32 GMT

ಬೆಳಗಾವಿ: ವಿರೋಧದ ನಡುವೆಯೂ ಬೆಳಗಾವಿಯ ಸುವರ್ಣ ಸೌಧದಲ್ಲಿ ಸಾವರ್ಕರ್ ಭಾವಚಿತ್ರವನ್ನು ಅನಾವರಣಗೊಳಿಸಲಾಯಿತು. ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಅನಾವರಣಗೊಳಿಸಿದರು.

ಸಾವರ್ಕರ್ ಫೋಟೊ ಜೊತೆಗೆ ಮಹಾತ್ಮ ಗಾಂಧೀಜಿ, ಅಂಬೇಡ್ಕರ್, ಸರ್ದಾರ್ ವಲ್ಲಭ್ ಬಾಯ್ ಪಟೇಲ್, ಸ್ವಾಮಿ ವಿವೇಕಾನಂದ, ಬಸವಣ್ಣರ ಫೋಟೊಗಳನ್ನೂ ಇದೇ ವೇಳೆ ಅನಾವರಣ ಮಾಡಲಾಗಿದೆ.

ಈ ಸಂದರ್ಭದಲ್ಲಿ  ಸಚಿವರಾದ ಜೆ.ಸಿ‌ ಮಾಧುಸ್ವಾಮಿ, ಗೋವಿಂದ ಕಾರಜೋಳ, ಸಿ.ಸಿ. ಪಾಟೀಲ್, ಕೋಟ ಶ್ರೀನಿವಾಸ ಪೂಜಾರಿ, ನಾರಾಯಣಗೌಡ, ಬೈರತಿ ಬಸವರಾಜ್, ಪ್ರಭು ಚಹ್ಹಾಣ್ ಹಾಜರಿದ್ದರು.

ಇದನ್ನೂ ಓದಿ: ಸುವರ್ಣ ವಿಧಾನಸೌಧದಲ್ಲಿ ಸಾರ್ವಕರ್ ಫೋಟೊ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

Similar News