ಮರಕ್ಕೆ ಢಿಕ್ಕಿ ಹೊಡೆದ ಲಾರಿ; ಇಬ್ಬರು ಸ್ಥಳದಲ್ಲೇ ಮೃತ್ಯು

Update: 2022-12-20 11:07 GMT

ದಾವಣಗೆರೆ: ಮರಕ್ಕೆ ಕ್ರಷರ್ ಲಾರಿ ಢಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ನಾಗರಸನಹಳ್ಳಿ ಗ್ರಾಮದ ಬಳಿ ಸೋಮವಾರ ಸಂಜೆ ನಡೆದಿದೆ.

ತಾಲೂಕಿನ ಹೊನ್ನನಾಯಕನಹಳ್ಳಿ ಗ್ರಾಮದ ಶಿವಕುಮಾರ್ (20)  ಹಾಗೂ ಹೆಬ್ಬಾಳು ಗ್ರಾಮದ ತೇಜಸ್(35) ಮೃತಪಟ್ಟವರು.

ಹೆಬ್ಬಾಳಿನಲ್ಲಿರುವ ಎಂ.ಸ್ಯಾಂಡ್ ಕ್ರಷರ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಇವರಿಬ್ಬರು ಕ್ರಷರ್ ತುಂಬಿ ಕೊಂಡು ಹೊನ್ನಾಳಿ ತಾಲೂಕಿನ ಕೂಲಂಬಿ ಕಡೆಗೆ ತೆರಳಿದ್ದರೆನ್ನಾಗಿದ್ದು, ಕೂಲಂಬಿಯಿಂದ ವಾಪಸ್ ಬರುತ್ತಿದ್ದ ವೇಳೆ ನಾಗರಸನಹಳ್ಳಿ ಬಳಿ ಮರಕ್ಕೆ ಢಿಕ್ಕಿ ಹೊಡೆದು ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.

ಈ ಸಂಬಂಧ  ಹದಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News