ಸಾಗರ | ಲಗೇಜ್ ಆಟೋ-ಬೈಕ್ ಮುಖಾಮುಖಿ ಢಿಕ್ಕಿ: ಬೈಕ್ ಸವಾರ ಸಾವು

Update: 2022-12-21 10:24 GMT

ಸಾಗರ: ಬೈಕ್ ಹಾಗೂ ಲಗೇಜ್ ಆಟೋ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ತಾಲೂಕಿನ ತುಮರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ತೇಕಲೆ ರಸ್ತೆ ತಿರುವಿನಲ್ಲಿ ಬುಧವಾರ ನಡೆದಿರುವುದಾಗಿ ವರದಿಯಾಗಿದೆ.

ಬೆಳಮಕ್ಕಿಯ ನಿವಾಸಿ ತಿಮ್ಮಣ್ಣ(40) ಮೃತಪಟ್ಟ ಬೈಕ್ ಸವಾರ ಎಂದು ಗುರುತಿಸಲಾಗಿದೆ. ತುಮರಿಯಿಂದ ಮನೆಯತ್ತ ತೆರಳುತ್ತಿದ್ದ ತಿಮ್ಮಣ್ಣ ಅವರ ಬೈಕ್ ಹಾಗೂ ಆಟೋ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ. ಬೈಕ್‌ನಲ್ಲಿದ್ದ ಸಹಸವಾರ ವಿಜಯಾ ಎಂಬವರಿಗೆ ತೀವ್ರವಾಗಿ ಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೋಟೇಶ್ವರದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ತೇಕಲೆ ತಿರುವು ತುಮರಿ ಭಾಗದ ಅಪಘಾತ ವಲಯವೆಂದೇ ಪರಿಗಣಿಸಲ್ಪಡುತ್ತಿದ್ದು, ಇತ್ತೀಚೆಗೆ ಅರಣ್ಯ ಪಾಲಕರೊಬ್ಬರೂ ಇದೇ ಸ್ಥಳದಲ್ಲಿ ರಸ್ತೆ ಅಪಘಾತಕ್ಕೆ ಬಲಿಯಾಗಿದ್ದರು. ಕಳೆದ ತಿಂಗಳಿನಲ್ಲಿಯೇ ನಾಲ್ಕು ಅಪಘಾತಗಳು ಸಂಭವಿಸಿವೆ ಎಂದು ತುಮರಿ ಗ್ರಾಪಂ ಮಾಜಿ ಅಧ್ಯಕ್ಷ ಸತ್ಯನಾರಾಯಣ ಕರೂರು ತಿಳಿಸಿದ್ದಾರೆ.

ಕಾರ್ಗಲ್ ಪೊಲೀಸರು ತನಿಖೆ ನಡೆಸಿದ್ದಾರೆ.

Similar News