ಅವಧಿ ಪೂರ್ವ ಚುನಾವಣೆ ಇಲ್ಲ: ಸಿಎಂ ಬೊಮ್ಮಾಯಿ

Update: 2022-12-24 08:51 GMT

ಹುಬ್ಬಳ್ಳಿ, ಡಿ.24: ಅವಧಿ ಮುಗಿಯುವ ಮೊದಲೇ ಚುನಾವಣೆ ನಡೆಸುವ ಚಿಂತನೆ ಸರ್ಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರಿಗೆ ನಮ್ಮ ಸರಾಕರದ ಕಾರ್ಯಕ್ರಮ ಮುಟ್ಟಿಸಿ, ಆ ವರದಿಯ ಆಧಾರದ ಮೇಲೆ ಸಕಾರಾತ್ಮಕ ಜನಾದೇಶ ಪಡೆಯಲು ನಾವು ಪ್ರಯತ್ನ ಮಾಡುತ್ತಿದ್ದೇವೆ. ಬಹುಶಃ ಕಾಂಗ್ರೆಸ್ ಗೆ ಸಮಯ ಕೊಟ್ಟಷ್ಟು ಅವರ ಒಳಜಗಳ ಹೆಚ್ಚಾಗುವ ಅಭದ್ರತೆ ಕಾಡುತ್ತಿದೆ ಎಂದು ತಿಳಿಸಿದರು.

Similar News