ಜನಾರ್ಧನ ರೆಡ್ಡಿ ಹೊಸ ಪಕ್ಷ: ಸಿ.ಟಿ.ರವಿ ಪ್ರತಿಕ್ರಿಯಿಸಿದ್ದು ಹೀಗೆ

Update: 2022-12-25 14:03 GMT

ಚಿಕ್ಕಮಗಳೂರು, ಡಿ.25: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪಕ್ಷ ಕಟ್ಟಲು ಮತ್ತು ಚುನಾವಣೆಯಲ್ಲಿ ಸ್ಫರ್ಧೆ ಮಾಡಲು ಎಲ್ಲರಿಗೂ ಅವಕಾಶವಿದೆ. ಪಕ್ಷದ ನಾಯಕರ ಬಗ್ಗೆ ಮತದಾರರು ಸೂಕ್ತ ನಿರ್ಣಯ ಮಾಡುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ.ರವಿ ಹೇಳಿದ್ದಾರೆ.

ಮಾಜಿ ಸಚಿವ ಜನಾರ್ಧನ ರೆಡ್ಡಿ ಅವರು ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ರವಿವಾರ ಸುದ್ದಿಗಾರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಮತದಾರರು ಯಾರಿಗೆ ಆಶೀರ್ವಾದ ಮಾಡುತ್ತಾರೆ ಎಂಬುದರ ಮೇಲೆ ಎಲ್ಲವೂ ನಿರ್ಣಯವಾಗಲಿದೆ ಎಂದರು.

ಕೆಲ ವಿಚಾರಗಳ ಬಗ್ಗೆ ಇಂದೇ ತೀರ್ಮಾನ ತಗೆದುಕೊಳ್ಳಲು ಬರಲ್ಲ. ಕಾಲ ತೀರ್ಮಾನ ಮಾಡುತ್ತದೆ. ಇತ್ತೀಚಿನ ದಿನಗಳಲ್ಲಿ ಜನಾರ್ಧನ ರೆಡ್ಡಿ ಮತ್ತು ನಾನು ವೈಯಕ್ತಿಕವಾಗಿ ಭೇಟಿಯಾಗಿಲ್ಲ. ಸಂಬಂಧ ಕೆಟ್ಟಿಲ್ಲ, ಆದರೆ ಭೇಟಿಯಾಗಲು ಸಾಧ್ಯವಾಗಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರೂ ಚುನಾವಣೆಯಲ್ಲಿ ಸ್ಫರ್ಧಿಸಲು ಅವಕಾಶವಿದೆ. ಈ ವಿಚಾರದ ಬಗ್ಗೆ ಪಕ್ಷದ ವರಿಷ್ಠರು ಇಂದಲ್ಲ ನಾಳೆ ತೀರ್ಮಾನ ಕೈಗೊಳ್ಳುತ್ತಾರೆ ಎಂದರು.

Similar News