ಐಸಿಐಸಿಐ ಸಾಲ ವಂಚನೆ ಪ್ರಕರಣ: ವಿಡಿಯೋಕಾನ್ ಸಮೂಹದ ಅಧ್ಯಕ್ಷ ವೇಣುಗೋಪಾಲ್ ಧೂತ್ ಬಂಧಿಸಿದ ಸಿಬಿಐ

Update: 2022-12-26 08:01 GMT

ಹೊಸದಿಲ್ಲಿ: ಐಸಿಐಸಿಐ ಸಾಲ ವಂಚನೆ ಪ್ರಕರಣದಲ್ಲಿ ವಿಡಿಯೋಕಾನ್ ಸಮೂಹದ ಅಧ್ಯಕ್ಷ ವೇಣುಗೋಪಾಲ್ ಧೂತ್ ಅವರನ್ನು ಕೇಂದ್ರ ತನಿಖಾ ದಳ(ಸಿಬಿಐ) ಸೋಮವಾರ ಬಂಧಿಸಿದೆ.

ಐಸಿಐಸಿಐ ಬ್ಯಾಂಕ್‌ನ ಮಾಜಿ ಸಿಇಒ ಚಂದಾ ಕೊಚ್ಚರ್ ಹಾಗೂ  ಅವರ ಪತಿ ದೀಪಕ್ ಕೊಚ್ಚರ್ ಅವರನ್ನು  ಖಾಸಗಿ ವಲಯದ ಬ್ಯಾಂಕ್‌ನ ಮುಖ್ಯಸ್ಥರಾಗಿದ್ದಾಗ ವಿಡಿಯೋಕಾನ್ ಗ್ರೂಪ್‌ಗೆ ಒದಗಿಸಿದ 3,000 ಕೋಟಿ ರೂ. ಗೂ ಹೆಚ್ಚು ಸಾಲದಲ್ಲಿ ಅವ್ಯವಹಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿರುವ  ಪ್ರಕರಣದಲ್ಲಿ ಸಿಬಿಐ ಬಂಧಿಸಿದ ಕೆಲವೇ ದಿನಗಳ ನಂತರ ಧೂತ್ ರನ್ನು ಬಂಧಿಸಲಾಗಿದೆ.

ಮುಂಬೈ ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಕೊಚ್ಚರ್ ದಂಪತಿಯನ್ನು ವಿಚಾರಣೆ ನಡೆಸಲಾಗುತ್ತಿದೆ.

Similar News