ಅಪಘಾತ | ಚೇತರಿಸಿಕೊಂಡು ವಿಶೇಷ ವಿಮಾನದ ಮೂಲಕ ಮೈಸೂರಿನಿಂದ ಅಹಮದಾಬಾದ್ಗೆ ತೆರಳಿದ ಪ್ರಹ್ಲಾದ್ ಮೋದಿ ಕುಟುಂಬ
Update: 2022-12-28 17:34 GMT
ಮೈಸೂರು,ಡಿ.28: ಮೈಸೂರು ತಾಲೂಕು ಕಡಕೊಳ ಬಳಿ ಮಂಗಳವಾರ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡು ಜೆಎಸ್ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಸಹೋದರ ಪ್ರಹ್ಲಾದ್ ಮೋದಿ ಹಾಗೂ ಕುಟುಂಬಸ್ಥರನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಬುಧವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಇದೇವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಪ್ರಹ್ಲಾದ್ ಮೋದಿಯವರು ಹಾಗೂ ಕುಟುಂಬಸ್ಥರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಅವರನ್ನು ಇಂದು ಸಂಜೆ 7 ಗಂಟೆಗೆ ವಿಶೇಷ ವಿಮಾನದ ಮೂಲಕ ಅಹಮದಾಬಾದ್ಗೆ ಕಳುಹಿಸಿಕೊಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಈ ವೇಳೆ ಪಾಲಿಕೆ ಮಹಾಪೌರರಾದ ಶಿವಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಮಂಗಳ ಸೋಮಶೇಖರ್ ಸೇರಿದಂತೆ ಹಲವರು ಜೊತೆಯಲ್ಲಿದ್ದರು.
ಇದನ್ನೂ ಓದಿ: ಮೈಸೂರು: ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ