ಚಿಕ್ಕಮಗಳೂರು | ರಾತ್ರಿ ಮದ್ಯ ಸೇವಿಸಿ ಮಲಗಿದ ಯುವಕ ಬೆಳಗ್ಗೆ ಮೃತ್ಯು: ಬಾರ್ ವಿರುದ್ಧ ಪ್ರತಿಭಟನೆ

Update: 2023-01-04 07:41 GMT

ಚಿಕ್ಕಮಗಳೂರು, ಜ.4: ರಾತ್ರಿ ಮದ್ಯ ಸೇವಿಸಿದ ಯುವಕನೋರ್ವ ಬೆಳಗ್ಗೆ ಮೃತಪಟ್ಟಿರುವ ಘಟನೆ ತರೀಕೆರೆ ತಾಲೂಕಿನ ಕರಕುಚ್ಚಿ ಕಾಲನಿಯಲ್ಲಿ ನಡೆದಿರುವುದು ವರದಿಯಾಗಿದೆ.

 ಮಂಜುನಾಥ್ (29) ಮೃತಪಟ್ಟವರು. ಕಳೆದ ರಾತ್ರಿ ಮದ್ಯ ಸೇವಿಸಿದ್ದ ಮಂಜುನಾಥ್ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾರೆನ್ನಲಾಗಿದೆ. ಇಲ್ಲಿನ ಬಾರ್ ನಲ್ಲಿ ಮದ್ಯ ಸೇವಿಸಿದ್ದೇ ಅವರ ಸಾವಿಗೆ ಕಾರಣ ಎಂದು ಆರೋಪಿಸಿ ಮೃತಪಟ್ಟ ಯುವಕನ ಕುಟುಂಬಸ್ಥರು ಬಾರ್ ಎದುರು ಮೃತದೇಹವಿಟ್ಟು ಪ್ರತಿಭಟನೆ ನಡೆಸಿದರು.

ಈ ಹಿಂದೆಯೂ ಇದೇ ರೀತಿ ಮೂರ್ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಆದ್ದರಿಂದ ಕೂಡಲೇ ಬಾರ್ ಮುಚ್ಚುವಂತೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

Similar News