ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ದಂಪತಿ ವಿಚ್ಛೇದನಕ್ಕೆ ಹೈಕೋರ್ಟ್ ತಡೆ

Update: 2023-01-07 16:29 GMT

ಬೆಂಗಳೂರು: ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಮತ್ತು ಅವರ ಪತ್ನಿ ಸವಿತಾ ಅವರಿಗೆ ಕೌಟುಂಬಿಕ ನ್ಯಾಯಾಲಯದಲ್ಲಿ ಮಂಜೂರಾಗಿದ್ದ ವಿಚ್ಛೇದನಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. 

ಮೈಸೂರಿನ ಕೌಟುಂಬಿಕ ನ್ಯಾಯಾಲಯ ಎಂ.ಪಿ. ಕುಮಾರಸ್ವಾಮಿ ದಂಪತಿಗೆ ಮಂಜೂರು ಮಾಡಿದ್ದ ವಿಚ್ಛೇದನ ಪ್ರಶ್ನಿಸಿ ಪತ್ನಿ ಸವಿತಾ ಅವರು ಹೈಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿದ್ದರು. 

ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್ ನ್ಯಾಯಪೀಠ, ಕೌಟುಂಬಿಕ ನ್ಯಾಯಾಲಯದಲ್ಲಿ ಮಂಜೂರಾಗಿದ್ದ ವಿಚ್ಛೇದನಕ್ಕೆ ತಡೆಯಾಜ್ಞೆ ನೀಡಿದೆ. 

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಅರ್ಜಿದಾರರಿಗೆ ಪತಿಯಿಂದ ವಿಚ್ಛೇದನ ಪಡೆಯುವ ಇಚ್ಛೆ ಇಲ್ಲ. ಪ್ರತಿವಾದಿಯಾಗಿರುವವರು 2ನೆ ಮದುವೆಯಾಗುವ ಸಾಧ್ಯತೆ ಇದೆ. ಹೀಗಾಗಿ, ವಿಚ್ಛೇದನ ಆದೇಶಕ್ಕೆ ತಡೆ ನೀಡುವಂತೆ ನ್ಯಾಯಾಲಯಕ್ಕೆ ವಿವರಿಸಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ಕೌಟುಂಬಿಕ ನ್ಯಾಯಾಲಯ ನೀಡಿದ್ದ ಆದೇಶಕ್ಕೆ ತಡೆ ನೀಡಿದೆ.

Similar News