'ಸಿದ್ದು ನಿಜ ಕನಸುಗಳು' ಕೃತಿ ಬಿಡುಗಡೆ ವಿರೋಧಿಸಿ ಸಿಎಂ ನಿವಾಸಕ್ಕೆ ಕಾಂಗ್ರೆಸ್ ಮುತ್ತಿಗೆ

Update: 2023-01-10 09:56 GMT

ಬೆಂಗಳೂರು, ಜ.10: ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಅಪಪ್ರಚಾರ ನಡೆಸುತ್ತಿರುವ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು. 

ಕೆಪಿಸಿಸಿ ಕಾರ್ಯಧ್ಯಕ್ಷ ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ 'ಸಿದ್ದು ನಿಜ ಕನಸುಗಳು' ಕೃತಿ ಬಿಡುಗಡೆ ವಿರೋಧಿಸಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸದ ಎದುರು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ಧ ಘೋಷಣೆ ಕೂಗಿದರು. 

ಈ ವೇಳೆ ಮಾತನಾಡಿದ ರಾಮಲಿಂಗಾ ರೆಡ್ಡಿ, 'ಬಿಜೆಪಿಯವರಂತೆ ಕಾಂಗ್ರೆಸ್ ಕೂಡ ಪುಸ್ತಕ  ಬಿಡುಗಡೆ ಮಾಡುವ ನಿರ್ಧಾರಕ್ಕೆ ಬಂದರೆ ಕೇಂದ್ರ, ರಾಜ್ಯದಲ್ಲಿರುವ ಬಿಜೆಪಿ ನಾಯಕರ ಹಗರಣಗಳ ಬಗ್ಗೆ ಸಾವಿರಾರು ಪುಟಗಳ ಪುಸ್ತಕ ಪ್ರಿಂಟ್ ಮಾಡ ಬೇಕಾಗಬಹುದು' ಎಂದು ಹೇಳಿದರು. 

Similar News