ಸಾಗರ | ಲಾರಿ ಢಿಕ್ಕಿ: ಬೈಕ್ ಸವಾರನಿಗೆ ತೀವ್ರ ಗಾಯ

Update: 2023-01-21 04:28 GMT

ಸಾಗರ, ಜ.21: ಬೈಕಿಗೆ ಲಾರಿಯೊಂದು ಢಿಕ್ಕಿ(Accident) ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಸಾಗರ ತಾಲೂಕಿನ ತಾಳಗುಪ್ಪದ ಗೌರಿ ಕೆರೆ ಬಳಿ ಇಂದು ಬೆಳಗ್ಗೆ ನಡೆದಿರುವುದು ವರದಿಯಾಗಿದೆ.

ಸಾಗರದಿಂದ ಸಿದ್ದಾಪುರ ಕಡೆಗೆ ತೆರಳುತ್ತಿದ್ದ ಬೈಕಿಗೆ ವಿರುದ್ಧ ದಿಕ್ಕಿನಿಂದ ಬಂದ ಲಾರಿ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ರಸ್ತೆಗೆಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿರುವ ಬೈಕ್ ಸವಾರನನ್ನು ಸಾಗರ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುವಿನ ಬಗ್ಗೆ ವಿವರ ಲಭ್ಯವಾಗಿಲ್ಲ.

ಅಪಘಾತಕ್ಕೆ ಲಾರಿ ಚಾಲಕನ ಅತೀ ವೇಗ ಹಾಗೂ ಅಜಾಗರೂಕತೆಯೆ ಕಾರಣ ಎನ್ನಲಾಗಿದ್ದು, ಘಟನೆಯ ಬಳಿಕ ಲಾರಿಯನ್ನು ಬಿಟ್ಟು  ಚಾಲಕ ಪರಾರಿಯಾಗಿದ್ದಾನೆ.

ಸಾಗರ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

Similar News