ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ: ಗೋಪಾಲಯ್ಯ ಬದಲು ಆರ್‌. ಅಶೋಕ್‌

Update: 2023-01-24 14:19 GMT

ಬೆಂಗಳೂರು, ಜ. 24: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ದೇಶನದಂತೆ ಕಂದಾಯ ಸಚಿವ ಆರ್.ಅಶೋಕ್ ಅವರನ್ನು ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಿ ಅಧಿಸೂಚನೆ ಹೊರಡಿಸಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಅಬಕಾರಿ ಸಚಿವ ಕೆ.ಗೋಪಾಲಯ್ಯ ಅವರನ್ನು ಬದಲಿಸಿ ಕಂದಾಯ ಸಚಿವ ಆರ್. ಅಶೋಕ್ ಅವರನ್ನು ನೇಮಿಸಿ ತಕ್ಷಣ ಜಾರಿಗೆ ಬರುವಂತೆ ಸರ್ಕಾರ ಆದೇಶ ಹೊರಡಿಸಿದೆ. 

Similar News