ಐವರು ಯೋಧರು ಹುತಾತ್ಮರಾದ ರಾಜೌರಿಗೆ ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ

Update: 2023-05-06 05:01 GMT

ಶ್ರೀನಗರ: ಐವರು ಸೇನಾ ಯೋಧರು ಹುತಾತ್ಮರಾದ ಸ್ಥಳದಲ್ಲಿ  ನಡೆಯುತ್ತಿರುವ ಕಾರ್ಯಾಚರಣೆಗಳನ್ನು ಪರಿಶೀಲಿಸಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶನಿವಾರ ಜಮ್ಮು ಮತ್ತು ಕಾಶ್ಮೀರದ ರಾಜೌರಿಗೆ ಭೇಟಿ ನೀಡಲಿದ್ದಾರೆ.

ರಕ್ಷಣಾ ಸಚಿವರೊಂದಿಗೆ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಕೂಡ ಇರಲಿದ್ದಾರೆ.

ಉತ್ತರ ಸೇನಾ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಉಪಸ್ಥಿತಿಯಲ್ಲಿ ರಾಜೌರಿಯ ಕಂಡಿಯಲ್ಲಿ ಭದ್ರತಾ ಪಡೆಗಳು ಉಗ್ರರೊಂದಿಗೆ ಗುಂಡಿನ ಚಕಮಕಿಯನ್ನು ನಡೆಸುತ್ತಿದ್ದಾರೆ. ಗ್ರೌಂಡ್ ಕಮಾಂಡರ್ ಮೂಲಕ ಕಾರ್ಯಾಚರಣೆಯ ಎಲ್ಲಾ ಅಂಶಗಳನ್ನು ಅವರು ವಿವರಿಸಿದರು.

ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಶುಕ್ರವಾರ  ಭಯೋತ್ಪಾದಕರ ವಿರುದ್ಧ ನಡೆಯುತಿದ್ದ  ಎನ್‌ಕೌಂಟರ್‌ನಲ್ಲಿ ನಡೆದ ಸ್ಪೋಟದಲ್ಲಿ ಐವರು ಸೇನಾ ಯೋಧರು ಹುತಾತ್ಮರಾಗಿದ್ದರು. ಪೂಂಛ್ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿರುವ ಶಂಕಿತ ಭಯೋತ್ಪಾದಕರನ್ನು ಹೊರಹಾಕಲು ಜಂಟಿ ಕಾರ್ಯಾಚರಣೆ ನಡೆಯುತ್ತಿದೆ.

Similar News