ಒಡಿಶಾ ರೈಲು ದುರಂತಕ್ಕೆ ಕೋಮುಬಣ್ಣ: ತುಮಕೂರಿನ ಬಿಜೆಪಿ ನಾಯಕಿಯ ಪೋಸ್ಟ್ ವೈರಲ್

ಒಡಿಶಾ ಪೊಲೀಸರ ಎಚ್ಚರಿಕೆ, ಮಾಹಿತಿ ಸಂಗ್ರಹ

Update: 2023-06-04 17:18 GMT

ತುಮಕೂರು: ಒಡಿಶಾದಲ್ಲಿ ನಡೆದ ರೈಲು ಅಪಘಾತದ ಪ್ರಕರಣಕ್ಕೆ ಕೋಮು ಬಣ್ಣ ನೀಡಿ, ರೈಲ್ವೆ ಹಳಿಯ ಬಳಿ ಮಸೀದಿಯಿತ್ತು ಎಂದು ಫೋಟೊವೊಂದನ್ನು ತುಮಕೂರಿನ ಬಿಜೆಪಿ ನಾಯಕಿಯೊಬ್ಬರು ಫೇಸ್ ಬುಕ್ ನಲ್ಲಿ ಶೇರ್‌ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. 

ತುಮಕೂರಿನ ಬಿಜೆಪಿ ನಾಯಕಿ ಶಕುಂತಲಾ ಎಸ್​ ಎನ್ನುವವರು ಈ ಘಟನೆಗೆ ಮಸೀದಿ ಪಕ್ಕದಲ್ಲಿ ಇರುವುದು ಕಾರಣ ಎಂದು ಬಿಂಬಿಸುವ ಅರ್ಥದಲ್ಲಿ ಫೋಟೊ ಪೋಸ್ಟ್ ಮಾಡಿದ್ದಾರೆ. ಅವರ ಫೇಸ್ ಬುಕ್ ಪೋಸ್ಟ್ ನ ಸ್ಕ್ರೀನ್ ಶಾಟ್ ಎಲ್ಲೆಡೆ ವೈರಲ್ ಆಗುತ್ತಿದೆ.

ವೈರಲ್ ಆಗುತ್ತಿರುವ ಫೇಸ್ ಬುಕ್ ಪೋಸ್ಟ್

ಮತ್ತೊಂದು ಕಡೆ 'ಕೋಮು ಆಯಾಮ' ನೀಡಲು ಪ್ರಯತ್ನಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಒಡಿಶಾ ಪೊಲೀಸರು ಎಚ್ಚರಿಸಿದ್ದಾರೆ. ಅಲ್ಲದೇ, ಈ ಪೋಸ್ಟ್ ಹಂಚಿಕೊಂಡವರ ಬಗ್ಗೆ ಒಡಿಶಾ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Similar News