ಆನೇಕಲ್: ಶೀಲ ಶಂಕಿಸಿ ಪತ್ನಿಯನ್ನು ಕೊಲೆಗೈದ ಪತಿ

Update: 2025-02-05 12:54 IST
ಆನೇಕಲ್: ಶೀಲ ಶಂಕಿಸಿ ಪತ್ನಿಯನ್ನು ಕೊಲೆಗೈದ ಪತಿ

ಕೊಲೆಯಾದ ಗಂಗಾ | ಆರೋಪಿ ಮೋಹನ್ ರಾಜ್

  • whatsapp icon

ಆನೇಕಲ್, ಫೆ.5: ಶೀಲ ಶಂಕಿಸಿ ಪತ್ನಿಯನ್ನು ಪತಿ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಹೆಬ್ಬಗೋಡಿ ರಾಮಯ್ಯ ಬಡಾವಣೆಯಲ್ಲಿ ಇಂದು ಬೆಳಗ್ಗೆ ನಡೆದಿದೆ.

ತಿರುಪಾಳ್ಯ ಮೂಲದ ಗಂಗಾ(27) ಕೊಲೆಯಾದ ಗೃಹಿಣಿ. ಈಕೆಯ ಪತಿ ಮೋಹನ್ ರಾಜ್ ಕೊಲೆ ಆರೋಪಿ.

ಪತ್ನಿಯ ಶೀಲ ಶಂಕಿಸಿ ಮೋಹನ್ ರಾಜ್ ಪ್ರತಿನಿತ್ಯ ಮನೆಯಲ್ಲಿ ಜಗಳ ಮಾಡುತ್ತಿದ್ದನೆನ್ನಲಾಗಿದೆ. ಅದೇರೀತಿ ಇಂದು ಬೆಳಗ್ಗೆ ಕೂಡಾ ಪತಿ-ಪತ್ನಿ ಮಧ್ಯೆ ಜಗಳ ನಡೆದಿದೆ. ಜಗಳ ತಾರಕಕ್ಕೇರಿ ಬೀದಿ ರಂಪಾಟವಾಗಿದೆ. ಈ ವೇಳೆ ರಸ್ತೆಯಲ್ಲೇ ಗಂಗಾ ಅವರ ಹೊಟ್ಟೆಗೆ ಮೋಹನ್ ರಾಜ್ ಚಾಕುವಿನಿಂದ ಇರಿದು ಕೊಲೆಗೈದಿದ್ದಾನೆ ಎಂದು ತಿಳಿದುಬಂದಿದೆ.

ಸ್ಥಳಕ್ಕಾಗಮಿಸಿದ್ದ ಹೆಬ್ಬಗೋಡಿ ಪೊಲೀಸರು ಆರೋಪಿ ಮೋಹನ್ ರಾಜ್ ನನ್ನು ವಶಕ್ಕೆ ಪಡೆದಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News