ಸಾಮಾಜಿಕ ಜಾಲತಾಣದಲ್ಲಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ನಿಂದನೆ : ಅಭಿಮಾನಿಗಳಿಂದ ಪೊಲೀಸರಿಗೆ ದೂರು

Update: 2024-04-05 15:10 GMT

Photo : x/@Ashwini_PRK | videograb

ಬೆಂಗಳೂರು: ಗಜಪಡೆ ಹೆಸರಿನ ಎಕ್ಸ್ ಖಾತೆಯಲ್ಲಿ ಕಿಡಿಗೇಡಿಗಳು ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ಕುರಿತು ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದು, ಈ ಕುರಿತು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ‘ಅಪ್ಪು ಹುಡುಗರು ಸಂಘಟನೆ’ಯ ನಿಯೋಗ ನಗರ ಪೊಲೀಸ್ ಆಯುಕ್ತರಿಗೆ ಶುಕ್ರವಾರ ದೂರು ನೀಡಿದೆ.

ಮಾ.19ರಂದು ನಡೆದ ಆರ್ ಸಿಬಿ ಅನ್‍ಬಾಕ್ಸ್ ಕಾರ್ಯಕ್ರಮವನ್ನು ಅಶ್ವಿನಿ ಪುನೀತ್ ರಾಜ್‍ಕುಮಾರ್ ಉದ್ಘಾಟಿಸಿದ್ದರು. ಈ ಹಿನ್ನೆಲೆಯಲ್ಲಿ ಗಜಪಡೆ ಹೆಸರಿನ ಎಕ್ಸ್ ಖಾತೆಯಲ್ಲಿ ಕಿಡಿಗೇಡಿಗಳು ಆರ್ ಸಿಬಿ ಪಂದ್ಯ ಸೋಲುವುದಕ್ಕೆ ಅಶ್ವಿನಿ ಪುನೀತ್‍ರಾಜ್‍ಕುಮಾರ್ ಕಾರ್ಯಕ್ರಮಕ್ಕೆ ಬಂದಿದ್ದೇ ಕಾರಣ ಎಂದು ನಿಂದಿಸಿ ಪೋಸ್ಟ್ ಮಾಡಿದ್ದರು.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆ ‘ಗಜಪಡೆ’ ಎಂಬ ಹೆಸರಿನ ನಕಲಿ ಎಕ್ಸ್ ಖಾತೆಯನ್ನು ‘ಸುದೀಪ್ ಅಭಿಮಾನಿ' ಎಂಬುದಾಗಿ ಬದಲಾಯಿಸಲಾಗಿದೆ. ಈ ಮೂಲಕ ಪುನೀತ್ ಹಾಗೂ ಸುದೀಪ್ ಅಭಿಮಾನಿಗಳ ನಡುವೆ ಸಾಮರಸ್ಯ ಕದಡಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸಿದ್ದಾರೆ. ಈ ಸಂಬಂಧ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಕೂಡಲೇ ಬಂಧಿಸಬೇಕು ಎಂದು ಅಪ್ಪು ಹುಡುಗರು ಸಂಘಟನೆಯ ಅಧ್ಯಕ್ಷ ಟಿ.ಆಂಜನೇಯ ಆಗ್ರಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News