ಬಾಗಲಕೋಟೆ | ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ್ ಪರ ಪ್ರಚಾರ ಮಾಡುವ ನಿರ್ಧಾರ ತೆಗೆದುಕೊಂಡಿಲ್ಲ: ವೀಣಾ ಕಾಶಪ್ಪನವರ್

Update: 2024-04-05 14:23 GMT

ಬೆಂಗಳೂರು : ಬಾಗಲಕೋಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ್ ಪರವಾಗಿ ನಾನು ಚುನಾವಣಾ ಪ್ರಚಾರಕ್ಕೆ ಹೋಗುವ ಕುರಿತು ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವೀಣಾ ಕಾಶಪ್ಪನವರ್ ತಿಳಿಸಿದ್ದಾರೆ.

ಶುಕ್ರವಾರ ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ ಅವರು, ಸಂಯುಕ್ತಾ ಪಾಟೀಲ್ ಪರವಾಗಿ ನಾನು ಪ್ರಚಾರಕ್ಕೆ ಹೋಗುತ್ತೇನೆ ಎಂದು ತನ್ನ ಪತಿ ವಿಜಯಾನಂದ ಕಾಶಪ್ಪನವರ್ ಹಾಗೂ ಬೇರೆ ಸಚಿವರು ನೀಡಿರುವ ಹೇಳಿಕೆಗಳು ಸತ್ಯಕ್ಕೆ ದೂರವಾದದ್ದು. ನಾನು ಅಂತಹ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸಂಯುಕ್ತಾ ಪಾಟೀಲ್ ಹಾಗೂ ಸಚಿವ ಶಿವಾನಂದ ಪಾಟೀಲ್ ಇಳಕಲ್‍ನಲ್ಲಿರುವ ವೀಣಾ ಕಾಶಪ್ಪನವರ್ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ ಎಂದು ಕ್ಷೇತ್ರದಲ್ಲಿ ಹರಿದಾಡುತ್ತಿರುವ ಸುದ್ದಿಯೂ ಸುಳ್ಳು. ಅನಾರೋಗ್ಯದ ಕಾರಣ ಹಲವು ದಿನಗಳಿಂದ ಬೆಂಗಳೂರಿನಲ್ಲಿದ್ದೇನೆ. ಆದುದರಿಂದ, ಇಳಕಲ್‍ನಲ್ಲಿ ನನ್ನನ್ನು ಅವರು ಭೇಟಿ ಮಾಡಲು ಹೇಗೆ ಸಾಧ್ಯ ಎಂದು ವೀಣಾ ಕಾಶಪ್ಪನವರ್ ಪ್ರಶ್ನಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News