ಬೆಂಗಳೂರು | ಚಿನ್ನ ಕಳ್ಳಸಾಗಣೆಗೆ ಯತ್ನ : 1.7 ಕೋಟಿ ರೂ. ಮೌಲ್ಯದ ಚಿನ್ನ ವಶಕ್ಕೆ, ಮೂವರ ಬಂಧನ

Update: 2024-07-18 16:17 GMT

ಸಾಂದರ್ಭಿಕ ಚಿತ್ರ

ಬೆಂಗಳೂರು : ಕಳ್ಳ ಸಾಗಾಣಿಕೆಯಲ್ಲಿ ಚಿನ್ನಾಭರಣ ಸಾಗಿಸಲು ಯತ್ನಿಸಿದ ಆರೋಪದಡಿ ಮೂವರು ವಿದೇಶಿಗರನ್ನು ಬಂಧಿಸಿ 2.44 ಕೆ.ಜಿ.ಚಿನ್ನವನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಥಾಯ್ಲೆಂಡ್ ದೇಶದ ಬ್ಯಾಂಕಾಂಕ್‍ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ 3 ವಿದೇಶಿಗರಿಂದ 1.71 ಕೋಟಿ ರೂ. ಮೌಲ್ಯದ 2.44 ಕೆಜಿ ಚಿನ್ನವನ್ನು ಜಪ್ತಿ ಮಾಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಗಳು ಕಚ್ಚಾ ಬಂಗಾರವನ್ನು ಅಡಗಿಸಿಕೊಂಡು ಅಕ್ರಮವಾಗಿ ಸಾಗಿಸುತ್ತಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News