ಬೆಂಗಳೂರು | ಹೋಟೆಲ್‍ನ 19ನೆ ಮಹಡಿಯಿಂದ ಜಿಗಿದು ತಮಿಳುನಾಡು ಮೂಲದ ವ್ಯಕ್ತಿ ಆತ್ಮಹತ್ಯೆ

Update: 2024-04-08 14:32 GMT

ಬೆಂಗಳೂರು: ಹೊಟೇಲ್‍ವೊಂದರ 19ನೇ ಮಹಡಿಯಿಂದ ಜಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ರೇಸ್ ಕೋರ್ಸ್ ರಸ್ತೆಯಲ್ಲಿ ಸೋಮವಾರ ವರದಿಯಾಗಿದೆ.

ಮೃತನನ್ನು ತಮಿಳುನಾಡು ಮೂಲದ ಶರಣ್(28) ಎಂದು ಗುರುತಿಲಾಗಿದೆ. ಇವರು ವಾಣಿಜ್ಯ ವ್ಯವಹಾರ ಉದ್ದೇಶಕ್ಕಾಗಿ ಶನಿವಾರ ಹೋಟೆಲ್‍ಗೆ ಚೆಕ್ ಇನ್ ಆಗಿದ್ದರು ಎಂದು ತಿಳಿದುಬಂದಿದೆ.

ಆತ್ಮಹತ್ಯೆಗೂ ಮುನ್ನ ಸೋಮವಾರ ಮಧ್ಯಾಹ್ನ 2:15ರ ಸುಮಾರಿಗೆ 19ನೇ ಮಹಡಿಗೆ ತೆರಳಿದ್ದ ಶರಣ್ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದುದನ್ನು ಸಾರ್ವಜನಿಕರು ಗಮನಿಸಿದ್ದರು. ತಕ್ಷಣ ಹೋಟೆಲ್‍ನ ಭದ್ರತಾ ಸಿಬ್ಬಂದಿಯ ಗಮನಕ್ಕೂ ತಂದಿದ್ದರು. ಸಿಬ್ಬಂದಿ ಸ್ಥಳಕ್ಕೆ ತೆರಳುವಷ್ಟರಲ್ಲಿ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವ್ಯಕ್ತಿ ಈ ಹಿಂದೆಯೂ ಸಹ ಇದೇ ಹೋಟೆಲ್‍ಗೆ ಭೇಟಿ ನೀಡಿದ್ದರು ಎಂದು ಗೊತ್ತಾಗಿದೆ.

ಘಟನಾ ಸ್ಥಳಕ್ಕೆ ಆಗಮಿಸಿದ ನಗರದ ಹೈಗ್ರೌಂಡ್ಸ್ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿರುವುದಾಗಿ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News