ಬೆಂಗಳೂರು | ಸಾರ್ವಜನಿಕರ ಮೊಬೈಲ್ ಕಸಿಯುತ್ತಿದ್ದ ಇಬ್ಬರ ಬಂಧನ

Update: 2024-05-26 12:57 GMT

ಸಾಂದರ್ಭಿಕ ಚಿತ್ರ

ಬೆಂಗಳೂರು : ಸಾರ್ವಜನಿಕರ ಮೊಬೈಲ್ ಕಸಿದು ಪರಾರಿಯಾಗುತ್ತಿದ್ದ ಪ್ರಕರಣದಡಿ ಇಬ್ಬರು ಆರೋಪಿಗಳನ್ನು ಇಲ್ಲಿನ ಬಾಣಸವಾಡಿ ಠಾಣಾ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ರಿಯಾಝ್ ಖಾನ್(36) ಹಾಗೂ ವಸೀಂ ಫಿರೋಝ್(21) ಎಂಬುವರು ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.

2023ರ ಡಿಸೆಂಬರ್ 23ರ ರಾತ್ರಿ ನಗರದ ಸಿಎಂಆರ್ ರಸ್ತೆಯ ಹೆಚ್‍ಡಿಎಫ್‍ಸಿ ಬ್ಯಾಂಕ್ ಬಳಿ ನಿಂತಿದ್ದ ವ್ಯಕ್ತಿಯೊಬ್ಬರ ಮೊಬೈಲ್ ಫೋನ್ ಕಿತ್ತುಕೊಂಡು ಆರೋಪಿಗಳು ಪರಾರಿಯಾಗಿದ್ದರು. ಸಿಸಿಟಿವಿ ಕ್ಯಾಮರಾ ದೃಶ್ಯ ಆಧರಿಸಿ ತನಿಖೆ ಮುಂದುವರೆಸಿದ್ದ ಬಾಣಸವಾಡಿ ಠಾಣೆಯ ಪೊಲೀಸರು, ಸಾರಾಯಿಪಾಳ್ಯದ ಕೋಳಿ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿತರ ಪೈಕಿ ರಿಯಾಜ್ ಖಾನ್ ವಿರುದ್ಧ ಈ ಹಿಂದೆ ಸಿಟಿ ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಡಕಾಯಿತಿ ಪ್ರಕರಣ ದಾಖಲಾಗಿತ್ತು. ಸದ್ಯ ಬಂಧಿತರಿಂದ ಒಂದು ಮೊಬೈಲ್, ಎರಡು ದ್ವಿಚಕ್ರ ವಾಹನಗಳು ಮತ್ತು ಒಂದು ಬೈಸಿಕಲ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News