ಬೆಂಗಳೂರು | ಬಿಎಂಟಿಸಿ ಬಸ್ ಢಿಕ್ಕಿ: ದ್ವಿಚಕ್ರ ವಾಹನ ಸವಾರ ಮೃತ್ಯು

Update: 2024-03-01 13:26 GMT

ಬೆಂಗಳೂರು: ಬಿಎಂಟಿಸಿ ಬಸ್ ಢಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಇಲ್ಲಿನ ಹೊಸ್ಮಾಟ್ ಜಂಕ್ಷನ್‍ನಲ್ಲಿ ವರದಿಯಾಗಿದೆ.

ದೇಬಶೀಶ್ ಬೆಹ್ರಾ(28) ಮೃತ ವ್ಯಕ್ತಿಯಾಗಿದ್ದು, ಫೆ.29ರಂದು ಘಟನೆ ನಡೆದಿದೆ. ಡಿಪೋ ನಂ.47ಕ್ಕೆ ಸೇರಿದ ಬಿಎಂಟಿಸಿ ಬಸ್ ಜ್ಯೋತಿಪುರದಿಂದ ಕೆ.ಆರ್.ಮಾರುಕಟ್ಟೆಗೆ ತೆರಳುತ್ತಿತ್ತು, ಈ ವೇಳೆ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ.

ಈ ವೇಳೆ ಕೆಳಗೆ ಬಿದ್ದ ದೇಬಶೀಶ್ ಬೆಹ್ರಾ ಅವರ ಮೇಲೆ ಬಸ್ ಹರಿದಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅಷ್ಟರಲ್ಲಾಗಲೇ ಮೃತಪಟ್ಟಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಈ ಸಂಬಂಧ ನಗರದ ಹಲಸೂರು ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಬಸ್ ಚಾಲಕನನ್ನು ವಶಕ್ಕೆ ಪಡೆದಿರುವುದಾಗಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News