ಬೆಂಗಳೂರು | ಬಿಎಂಟಿಸಿ ಬಸ್ ಢಿಕ್ಕಿ: ವಿದ್ಯಾರ್ಥಿನಿ ಮೃತ್ಯು

Update: 2024-02-02 12:51 GMT

ಸಾಂದರ್ಭಿಕ ಚಿತ್ರ

ಬೆಂಗಳೂರು: ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್ ಢಿಕ್ಕಿ ಹೊಡೆದು ಕಾಲೇಜು ವಿದ್ಯಾರ್ಥಿನಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಲ್ಲಿನ ಮಲ್ಲೇಶ್ವರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಹರಿಶ್ಚಂದ್ರ ಘಾಟ್ ಬಳಿ ಶುಕ್ರವಾರ ವರದಿಯಾಗಿದೆ.

ಕುಸುಮಿತಾ(21) ಎಂಬುವರನ್ನು ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ. ನಗರದ ಖಾಸಗಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಕುಸುಮಿತಾ, ಶುಕ್ರವಾರ ಬೆಳಗ್ಗೆ 8.30ರ ಸುಮಾರಿಗೆ ತಮ್ಮ ನಿವಾಸದಿಂದ ಕಾಲೇಜಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಇದೇ ಸಂದರ್ಭದಲ್ಲಿ ಬಿಎಂಟಿಸಿ ಬಸ್ ಹಿಂಬದಿಯಿಂದ ಢಿಕ್ಕಿ ಹೊಡೆದು ಕುಸುಮಿತಾ ಅವರು ಕೆಳಗೆ ಬಿದ್ದಿದ್ದಾರೆ. ಈ ವೇಳೆ ಬಸ್ ಕುಸುಮಿತಾ ಅವರ ಮೇಲೆ ಹರಿದು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ಎಂದು ತಿಳಿದುಬಂದಿದೆ.

ಘಟನೆ ಸಂಬಂಧ ನಗರದ ಮಲ್ಲೇಶ್ವರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಎಂಟಿಸಿ ಚಾಲಕ ಘಟನೆಯ ನಂತರ ವಾಹನ ಬಿಟ್ಟು ಪರಾರಿಯಾಗಿದ್ದು, ಪರಿಶೀಲನೆ ನಡೆಸಿ ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News