ಬೆಂಗಳೂರು | ಕೊಳೆತ ಸ್ಥಿತಿಯಲ್ಲಿ ದಂಪತಿಯ ಮೃತದೇಹ ಪತ್ತೆ

Update: 2024-06-07 12:21 GMT

ಬೆಂಗಳೂರು : ಇಲ್ಲಿನ ಬನ್ನೇರುಘಟ್ಟದ ಜನತಾ ಕಾಲನಿಯ ಮನೆಯೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ದಂಪತಿಯ ಮೃತದೇಹಗಳು ಪತ್ತೆಯಾಗಿರುವುದು ವರದಿಯಾಗಿದೆ.

ಪ್ರಭು(25) ಹಾಗೂ ಲಕ್ಕಮ್ಮ(30)ಎಂಬವರ ಮೃತದೇಹ ಎಂದು ಗುರುತಿಸಲಾಗಿದ್ದು, ಈ ಸಂಬಂಧ ಬನ್ನೇರುಘಟ್ಟ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ಪ್ರಭು ವೃತ್ತಿಯಲ್ಲಿ ಚಾಲಕನಾಗಿದ್ದರೆ, ಲಕ್ಕಮ್ಮ ಗಾರ್ಮೆಂಟ್ಸ್‌ ಕೆಲಸ ಮಾಡುತ್ತಿದ್ದರು. ವಿಶ್ವನಾಥ್ ಎಂಬವರ ಮನೆಯಲ್ಲಿ ಬಾಡಿಗೆ ಪಡೆದು ದಂಪತಿ ವಾಸ ಮಾಡುತ್ತಿದ್ದರು ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ಇಬ್ಬರೂ ಮೂರ್ನಾಲ್ಕು ದಿನಗಳಿಂದ ಮನೆಯಿಂದ ಹೊರಗೆ ಕಾಣಿಸಿಕೊಂಡಿರಲಿಲ್ಲ. ಜೂ.4ರ ಮಂಗಳವಾರ ಮನೆಯ ಬಳಿ ಕೆಟ್ಟ ವಾಸನೆ ಬರುತ್ತಿದೆ ಎಂದು ಸ್ಥಳೀಯರು ನೀಡಿದ ದೂರಿನನ್ವಯ ಬನ್ನೇರುಘಟ್ಟ ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಸ್ಥಳದಲ್ಲಿ ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳ ಜೊತೆ ಬನ್ನೇರುಘಟ್ಟ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಸಲಾಗಿದ್ದು, ಸದ್ಯದಲ್ಲೇ ವರದಿ ಬರಲಿದ್ದು ಆನಂತರ ಸಾವಿನ ಹಿಂದಿನ ನಿಖರ ಕಾರಣ ಗೊತ್ತಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News