ಬೆಂಗಳೂರು | ಗಾಂಜಾ ಸೇವನೆಗೆ ಹಣ ಹೊಂದಿಸಲು ಕಳ್ಳತನ : ಆರೋಪಿ ಬಂಧನ

Update: 2024-07-30 12:48 GMT

ಸಾಂದರ್ಭಿಕ ಚಿತ್ರ

ಬೆಂಗಳೂರು : ಗಾಂಜಾ ಸೇವನೆಗೆ ಹಣ ಹೊಂದಿಸಲು ಮೊಬೈಲ್‍ಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪದಡಿ ಯುವಕನನ್ನು ಇಲ್ಲಿನ ವೈಟ್‍ಫೀಲ್ಡ್ ಠಾಣೆ ಪೊಲೀಸರು ಬಂಧಿಸಿರುವುದಾಗಿ ತಿಳಿಸಿದ್ದಾರೆ.

ಬಿಹಾರ ಮೂಲದ ಅಬ್ದುಲ್ ರಝಾಕ್(22) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತನಿಂದ 4.5 ಲಕ್ಷ ರೂ. ಮೌಲ್ಯದ 32 ಮೊಬೈಲ್ ಫೋನ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕಾಡುಗೋಡಿಯಲ್ಲಿ ನೆಲೆಸಿದ್ದ ಆರೋಪಿಯು, ಗಾಂಜಾ ಚಟ ಬೆಳೆಸಿಕೊಂಡು ಅದಕ್ಕಾಗಿ ಹಣ ಹೊಂದಿಸಲು ಮೊಬೈಲ್‍ಗಳ ಕಳ್ಳತನ ಮಾಡುತ್ತಿದ್ದ. ಕದ್ದ ಮೊಬೈಲ್‍ಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡಿ, ಬಂದ ಹಣದಲ್ಲಿ ಗಾಂಜಾ ಖರೀದಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚೆಗೆ ವೈಟ್‍ಫೀಲ್ಡ್ ಪೊಲೀಸ್ ಠಾಣೆಯ ವಿಜಯನಗರ ಮುಖ್ಯರಸ್ತೆಯಲ್ಲಿರುವ ಕಾರ್ ವಾಷ್ ಅಂಗಡಿಯೊಂದರಲ್ಲಿ ಮೊಬೈಲ್ ಕಳ್ಳತನ ಮಾಡಿದ್ದಾನೆ. ಈ ಸಂಬಂಧ ಬಂದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ವಿವರಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News