ಬೆಂಗಳೂರು | ರೈಲಿಗೆ ಸಿಲುಕಿ ಆಂಧ್ರ ಪ್ರದೇಶ ಮೂಲದ ಮೂವರು ಮೃತ್ಯು

Update: 2024-04-25 13:25 GMT

ಸಾಂದರ್ಭಿಕ ಚಿತ್ರ - PTI

ಬೆಂಗಳೂರು: ಯಶವಂಶಪುರ-ಕಣ್ಣೂರು ಎಕ್ಸ್ ಪ್ರೆಸ್ ರೈಲಿಗೆ ಸಿಲುಕಿ ಆಂಧ್ರ ಪ್ರದೇಶ ಮೂಲದ ಮೂವರು ಯುವಕರು ಮೃತಪಟ್ಟಿರುವ ಘಟನೆ ಬೈಯ್ಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾರತಹಳ್ಳಿ ಬಳಿ ಗುರವಾರ ವರದಿಯಾಗಿದೆ.

ಆಂಧ್ರ ಪ್ರದೇಶದ ಮೂಲದ ಶಶಿಕುಮಾರ್(23), ಲೋಕೇಶ್(25) ಹಾಗೂ ಮತ್ತೋರ್ವ ವ್ಯಕ್ತಿ ಮೃತರೆಂದು ಗುರುತಿಸಲಾಗಿದೆ. ಎ.25ರ ಗುರುವಾರ ಬೆಳಗ್ಗೆ ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ರೈಲ್ವೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದು, ಮೃತಪಟ್ಟ ಯುವಕರು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದರೇ? ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News