‘ಕಾಮನ್‍ವೆಲ್ತ್ ಸಂಸ್ಥೆ’ಯ ಭಾರತ ವಲಯದ ಸಮ್ಮೇಳನದಲ್ಲಿ ಸಭಾಪತಿ ಹೊರಟ್ಟಿ ಭಾಗಿ

Update: 2024-09-19 13:36 GMT

ಬೆಂಗಳೂರು : ಎರಡು ದಿನಗಳ ಕಾಲ ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ 10ನೆ ಕಾಮನ್‍ವೆಲ್ತ್ ಸಂಸದೀಯ ಸಂಘದ ಭಾರತ ವಲಯದ ಸಮ್ಮೇಳನ ಜರುಗಲಿದ್ದು, ಕರ್ನಾಟಕದ ಪ್ರತಿನಿಧಿಯಾಗಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ.

ಸಮ್ಮೇಳನದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಸುಸ್ಥಿರ ಹಾಗೂ ಸಮಗ್ರ ಅಭಿವೃದ್ದಿ ಸಾಧಿಸುವಲ್ಲಿ ಶಾಸನ ಸಭೆಗಳ ಪಾತ್ರ’ ಎಂಬ ವಿಷಯ ಕುರಿತು ವಿಚಾರ ಮಂಡಿಸಲಿದ್ದು, ತಮ್ಮ 45 ವರ್ಷಗಳ ಸುಧೀರ್ಘ ಸಂಸದೀಯ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಅವರು ಸೆ.23ರಂದು ಸಮ್ಮೇಳನವನ್ನು ಉದ್ಘಾಟಿಸಲಿದ್ದು, ದೇಶದ ಎಲ್ಲ ರಾಜ್ಯಗಳ ವಿಧಾನಸಭೆಯ ಸಭಾಧ್ಯಕ್ಷರು, ಉಪಸಭಾಧ್ಯಕ್ಷರು ಹಾಗೂ ಪರಿಷತ್ತಿನ ಸಭಾಪತಿ ಹಾಗೂ ಉಪಸಭಾಪತಿಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News