ಬೆಂಗಳೂರು | ಬಿಎಂಟಿಸಿ ಬಸ್ ಹರಿದು ವಿಶೇಷಚೇತನ ಯುವಕ ಮೃತ್ಯು

Update: 2024-09-18 14:57 GMT

ಸಾಂದರ್ಭಿಕ ಚಿತ್ರ

ಬೆಂಗಳೂರು : ಬಿಎಂಟಿಸಿ ಬಸ್ ಹರಿದು ವಿಶೇಷಚೇತನ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬುಧವಾರ ವರದಿಯಾಗಿದೆ.

ಸೆ.18ರ ಬುಧವಾರ ಬೆಳಗಿನ ಜಾವ ಘಟನೆ ನಡೆದಿದ್ದು, ಬಿಎಂಟಿಸಿ ಬಸ್‍ವೊಂದು ನಿಲ್ದಾಣದಲ್ಲಿ ನಡೆದು ಹೋಗುತ್ತಿದ್ದ ಯುವಕನ ಮೇಲೆ ಹರಿದು ಘಟನೆ ಸಂಭವಿಸಿದೆ. ಸದ್ಯ ಬಿಎಂಟಿಸಿ ಚಾಲಕ ಗೋಪಾಲ್ ಅವರನ್ನು ಉಪ್ಪಾರಪೇಟೆ ಸಂಚಾರ ಠಾಣಾ ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿಸಿದ್ದಾರೆ.

ನಿಲ್ದಾಣದಲ್ಲಿ ಪ್ರಯಾಣಿಕರ ಸುರಕ್ಷತೆ ಬಗ್ಗೆ ಎಚ್ಚರವಹಿಸುತ್ತಿಲ್ಲ. ಬಿಎಂಟಿಸಿ ಬಸ್ ಚಾಲಕನ ಅಜಾಗರೂಕತೆಗೆ ಯುವಕ ಬಲಿಯಾಗಿದ್ದಾನೆ. ಅತಿ ವೇಗವೇ ಘಟನೆಗೆ ಕಾರಣ. ನಿಲ್ದಾಣದಲ್ಲಿ ಚಾಲಕರು ವೇಗವಾಗಿ ಬಸ್ ಚಲಾಯಿಸುತ್ತಾರೆ. ಬಸ್ ನಿಲ್ದಾಣದಲ್ಲಿ ಹಂಪ್ ಹಾಕಬೇಕು ಎಂದು ಪ್ರಯಾಣಿಕರು ಆಕ್ರೋಶ ಹೊರಹಾಕಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News