ಬೆಂಗಳೂರು | ಮದ್ಯದ ಅಮಲಿನಲ್ಲಿ ಮೆಟ್ರೋ ಸಿಬ್ಬಂದಿ ಮೇಲೆ ಹಲ್ಲೆ, ನಿಂದನೆ : ಓರ್ವ ಪೊಲೀಸ್ ವಶಕ್ಕೆ, ಮೂವರು ಪರಾರಿ

Update: 2024-10-07 12:36 GMT

ಬೆಂಗಳೂರು : ಮದ್ಯ ಕುಡಿದ ಅಮಲಿನಲ್ಲಿ ನಾಲ್ವರು ಯುವಕರು ಪುರುಷ ಭದ್ರತಾ ಅಧಿಕಾರಿ ಮೇಲೆ ಹಲ್ಲೆ ನಡೆಸಿದ್ದು, ಮಹಿಳಾ ಭದ್ರತಾ ಸಿಬ್ಬಂದಿ ಹಾಗೂ ಟಿಕೆಟ್ ಕೌಂಟರ್‌ ನಲ್ಲಿದ್ದ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆ ಇಲ್ಲಿನ ಕಾಡುಗೋಡಿ ಟ್ರೀ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ವರದಿಯಾಗಿದೆ.

ಅ.6ರ ರಾತ್ರಿ ಘಟನೆ ನಡೆದಿದ್ದು, ನಾಲ್ವರು ಯುವಕರ ಪೈಕಿ ಓರ್ವನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಇನ್ನುಳಿದವರು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಆರೋಪಿಗಳು ಸ್ಥಳೀಯ ನಿವಾಸಿಗಳಾಗಿದ್ದು, ಸದ್ಯಕ್ಕೆ ಅವರ ಬಗ್ಗೆ ನಮಗೆ ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ ಎಂದು ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News