ಬೆಂಗಳೂರು | ಕೆಂಗೇರಿ ಕೆರೆಗೆ ಬಿದ್ದು ನಾಪತ್ತೆಯಾಗಿದ್ದ ಇಬ್ಬರು ಮಕ್ಕಳ ಮೃತದೇಹ ಪತ್ತೆ

Update: 2024-10-22 15:43 GMT

ಬೆಂಗಳೂರು : ಇಲ್ಲಿನ ಕೆಂಗೇರಿ ಕೆರೆ ಬಳಿ ನಾಪತ್ತೆಯಾಗಿದ್ದ ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಸತತ ಕಾರ್ಯಾಚರಣೆ ನಡೆಸಿ ಮೃತದೇಹ ಪತ್ತೆ ಮಾಡಲಾಯಿತು.

ಇಲ್ಲಿನ ಕೆಂಗೇರಿ ಬಳಿಯ ಹರ್ಷ ಲೇಔಟ್ ನಿವಾಸಿ ಜಯಮ್ಮ ಎಂಬುವರ ಮಕ್ಕಳಾದ ಜಾನ್ಸನ್ ಯಾನೆ ಶ್ರೀನಿವಾಸ್ (15) ಹಾಗೂ ಮಹಾಲಕ್ಷ್ಮಿ(13) ಎಂಬುವರು ನಿನ್ನೆ ಸಂಜೆ ಕೆಂಗೇರಿ ಕೆರೆ ಬಳಿ ತೆರಳಿದ್ದರು.ಈ ವೇಳೆ ಜಾರಿ ಕೆರೆಗೆ ಬಿದ್ದು ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ನಿನ್ನೆ ಸಂಜೆಯೇ ಸ್ಥಳಕ್ಕೆ ಆಗಮಿಸಿದ್ದ ಪೊಲೀಸ್ ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿ ಮಕ್ಕಳ ಶವಪತ್ತೆಗಾಗಿ ಕಾರ್ಯಾಚರಣೆ ಆರಂಭಿಸಿದ್ದರು. ಆದರೆ ಮಳೆ ಕಾರಣ ರಾತ್ರಿಯ ವೇಳೆಗೆ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದರು.

ಮಂಗಳವಾರ ಮುಂಜಾನೆಯಿಂದಲೇ ಬೋರ್‍ವೆಲ್‍ನಲ್ಲಿ ಬಳಸುವ ಕ್ಯಾಮರಾ ಬಳಸಿ ಕಾರ್ಯಾಚರಣೆ ನಡೆಸಿ ಇಬ್ಬರ ಮೃತದೇಹ ಪತ್ತೆ ಮಾಡಲಾಯಿತು ಎಂದು ಕೆಂಗೇರಿ ಠಾಣಾ ಪೊಲೀಸರು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News