ಬೆಂಗಳೂರು: ಸಂಶೋಧನಾ ವಿದ್ಯಾರ್ಥಿ ಆತ್ಮಹತ್ಯೆ

Update: 2023-12-01 17:33 GMT

ಬೆಂಗಳೂರು: ಭಾರತೀಯ ವಿಜ್ಞಾನ ಸಂಸ್ಥೆಯ ಪಿಎಚ್‍ಡಿ ಓದುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

2022ನೇ ಬ್ಯಾಚ್‍ನ ದ್ವಿತೀಯ ವರ್ಷದ ವಿದ್ಯಾರ್ಥಿ ಡೈಮೊಂಡ್ ಖುಷ್ವಾ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಮೃತದೇಹವನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ. ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೂ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಈ ಸಂಬಂಧ ಐಐಎಸ್‍ಸಿ ಪ್ರಕಟನೆ ಹೊರಡಿಸಿ, ಕ್ಯಾಂಪಸ್ ಎಲ್ಲರಿಗೂ ಸುರಕ್ಷಿತ ಸ್ಥಳವಾಗಿದೆ. ಎಲ್ಲ ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಸಿಬ್ಬಂದಿ ತಕ್ಷಣವೇ ತಮ್ಮ ಕ್ಯಾಂಪಸ್‍ನಲ್ಲಿ ಲಭ್ಯವಿರುವ ಆಪ್ತ ಸಹಾಯಕರ ನೆರವು ಪಡೆಯಬೇಕು. ಮಾನಸಿಕ ಆರೋಗ್ಯ ವೃತ್ತಿಪರರೊಂದಿಗೆ ಮಾತನಾಡಲು ಅಗತ್ಯ ಇರುವವರು ದೂರವಾಣಿ ಸಂಖ್ಯೆ 080 47113444 ಅನ್ನು ಸಂಪರ್ಕಿಸಬೇಕು ಎಂದು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News