ಬೆಂಗಳೂರಿನಲ್ಲಿ ಮಹಿಳೆಯ ಭೀಕರ ಕೊಲೆ ಪ್ರಕರಣ: ಆರೋಪಿ ಪತ್ತೆಗೆ 6 ವಿಶೇಷ ಪೊಲೀಸ್ ತಂಡ ರಚನೆ

Update: 2024-09-22 13:56 GMT

ಮೃತ ಮಹಿಳೆ ಮಹಾಲಕ್ಷ್ಮಿ (Photo credit: X)

ಬೆಂಗಳೂರು: ಮಹಿಳೆಯನ್ನು ಹತ್ಯೆಗೈದು ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್ ನಲ್ಲಿ ಇರಿಸಿದ್ದ ಪ್ರಕರಣ ಸಂಬಂಧ ಆರೋಪಿಯ ಪತ್ತೆಗೆ ಕೇಂದ್ರ ವಿಭಾಗದ ಡಿಸಿಪಿ ಶೇಖರ್ ನೇತೃತ್ವದಲ್ಲಿ 6 ವಿಶೇಷ ಪೊಲೀಸ್ ತಂಡಗಳನ್ನು ರಚಿಸಸಲಾಗಿದೆ.

ಘಟನೆ ನಡೆದ ಮನೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿರುವ ನೂರಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಲಾಗಿದೆ. ಮೃತ ಮಹಿಳೆ ಮಹಾಲಕ್ಷ್ಮೀಯ ಫೋನ್ ಸೆ.2ರಂದು ಸ್ವಿಚ್ ಆಫ್ ಆಗಿದ್ದು, ಆಕೆಯೊಂದಿಗೆ ಕೊನೆಯ ಬಾರಿಗೆ ಸಂಪರ್ಕದಲ್ಲಿದ್ದವರ ಬಗ್ಗೆ ಮಾಹಿತಿ ಕಲೆ ಹಾಕುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮೃತದೇಹದ ಮರಣೋತ್ತರ ಪರೀಕ್ಷೆ ಬೌರಿಂಗ್ ಆಸ್ಪತ್ರೆಯಲ್ಲಿ ನಡೆಸಲಾಗಿದ್ದು, ಹತ್ಯೆಯಾಗಿ ಹಲವು ದಿನ ಕಳೆದಿರುವುದು ಮತ್ತು ಮೃತದೇಹವನ್ನು ಕತ್ತರಿಸಿರುವುದರಿಂದ ಮರಣೋತ್ತರ ಪರೀಕ್ಷೆ ನಡೆಸುವುದು ವೈದ್ಯರಿಗೆ ಸವಾಲಾಗಿದೆ. ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News