ಕಲುಷಿತ ನೀರು ಸೇವನೆಯಿಂದ ಮಹಿಳೆ ಸಾವು ಪ್ರಕರಣ: ನಗರ ಸಭೆ ಆಯುಕ್ತ ಸೇರಿ ಮೂವರ ಅಮಾನತು

Update: 2024-01-08 10:50 GMT

ಬೆಂಗಳೂರು: ವಿಜಯನಗರ ಜಿಲ್ಲೆ ಹೊಸಪೇಟೆ ನಗರಸಭೆಯ ಕಾರಿಗನೂರಿನ ವಾರ್ಡ್ ನಲ್ಲಿ ಕಲುಷಿತ ನೀರು ಸೇವಿಸಿ 35 ಮಂದಿ ಅಸ್ವಸ್ಥಗೊಂಡು ಸೀತಮ್ಮ ಎಂಬುವವರು ಮೃತ ಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಸಭೆ ಆಯುಕ್ತರಾದ ಬಂಡಿ ವಡ್ಡರ್, ಸಹಾಯಕ ಕಾರ್ಯಪಾಲಕ ಅಭಿಯಂತರ ಸತೀಶ್ ಹಾಗೂ ಕಿರಿಯ ಅಭಿಯಂತರ ಖಾಜಿ ಅವರನ್ನು ಅಮಾನತುಗೊಳಿಸಲು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ.

ಮೂವರು ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಿ ಇಲಾಖಾ ವಿಚಾರಣೆ ನಡೆಸಲು ನಿರ್ದೇಶನ ನೀಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ದಿವಾಕರ್ ಅವರ ಜತೆ ನಿರಂತರ ಸಂಪರ್ಕ ದಲ್ಲಿದ್ದು ಮಾಹಿತಿ ಪಡೆದು ಪ್ರಕರಣ ಮರು ಕಳಿಸದಂತೆ ಎಲ್ಲ ರೀತಿಯ ಮುನ್ನಚ್ಚರಿಕೆ ವಹಿಸುವಂತೆ ಸೂಚನೆ ನೀಡಿದ್ದಾರೆ.

ಕುಡಿಯುವ ನೀರು ಪೊರೈಕೆ ಹಾಗೂ ಒಳಚರಂಡಿ ವ್ಯವಸ್ಥೆ, ಸ್ವಚ್ಛತೆ ಬಗ್ಗೆ ನಿಗಾ ವಹಿಸುವಂತೆಯೂ ನಿರ್ದೇಶನ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News