ಬೆಂಗಳೂರು | ಗೇಟ್ ಬಿದ್ದು ಮೃತಪಟ್ಟ ಬಾಲಕನ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ಘೋಷಿಸಿದ ಡಿ.ಕೆ.ಶಿವಕುಮಾರ್

Update: 2024-09-24 15:22 GMT

ಬೆಂಗಳೂರು : ಇಲ್ಲಿನ ಮಲ್ಲೇಶ್ವರದ ರಾಜಾ ಶಂಕರ್ ಆಟದ ಮೈದಾನದಲ್ಲಿ ಕಬ್ಬಿಣದ ಗೇಟ್ ಬಿದ್ದು ಮೃತಪಟ್ಟಿದ್ದ ಬಾಲಕ ನಿರಂಜನ್ ಕುಟುಂಬಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ನಿರ್ಲಕ್ಷ್ಯ ತೋರಿರುವ ಸಹಾಯಕ ಎಂಜಿನಿಯರ್ ಶ್ರೀನಿವಾಸ್ ರಾಜು ಅಮಾನತಿಗೆ ಆದೇಶ ಮಾಡಲಾಗಿದ್ದು, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕೆ.ಶಾಂತಲಾ, ದೇವರಾಜು, ಬೀಬಿ ಆಯಿಷಾ ಹುಸೇನ್ ಅವರನ್ನು ಅಮಾನತುಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ, ಕಾರ್ಯಪಾಲಕ ಇಂಜಿನಿಯರ್ ಎಲ್.ವೆಂಕಟೇಶ್ ಅವರಿಗೆ ಕಾರಣ ಕೇಳಿ ನೋಟೀಸ್ ನೀಡಲಾಗಿದೆ.

2021ರ ಮೇ 21ರಂದು ಈ ಕಾಮಗಾರಿಗೆ ಕಾರ್ಯಾದೇಶ ನೀಡಲಾಗಿತ್ತು. ಘಟನೆಯ ನಂತರ ಸ್ಥಳ ಪರಿಶೀಲನೆ ವೇಳೆ ಕಾಮಗಾರಿಯನ್ನು ಸಮರ್ಪಕವಾಗಿ ನಿರ್ವಹಿಸದೇ ಇರುವುದು ಹಾಗೂ ಮೈದಾನ ನಿರ್ವಹಣೆಯಲ್ಲಿ ಕೊರತೆ ಉಂಟಾಗಿದೆ ಎಂದು ಹೇಳಲಾಗಿದೆ.

ಆಟದ ಮೈದಾನದ ಸಂಪೂರ್ಣ ಕಾಮಗಾರಿಯ ಕುರಿತು ಹಿರಿಯ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಲಾಗಿದ್ದು, ಒಂದು ವಾರದೊಳಗೆ ಪರಿಶೀಲಿಸಿ ಸಂಪೂರ್ಣ ವರದಿ ನೀಡಬೇಕು ಎಂದು ಬಿಬಿಎಂಪಿ ಪ್ರಕಟನೆಯಲ್ಲಿ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News