‘ಪ್ರವಾಸಿ ಭಾರತೀಯ ದಿವಸ’ ಕಾರ್ಯಕ್ರಮದಲ್ಲಿ ಭಾಗವಹಿಸಿದ ಡಾ.ಆರತಿ ಕೃಷ್ಣಾ

Update: 2025-01-15 22:31 IST
‘ಪ್ರವಾಸಿ ಭಾರತೀಯ ದಿವಸ’ ಕಾರ್ಯಕ್ರಮದಲ್ಲಿ ಭಾಗವಹಿಸಿದ ಡಾ.ಆರತಿ ಕೃಷ್ಣಾ
  • whatsapp icon

ಬೆಂಗಳೂರು : ಒಡಿಸ್ಸಾದ ಭುವನೇಶ್ವರದಲ್ಲಿ ಜ.8ರಿಂದ 10ರ ವರೆಗೆ ಆಯೋಜಿಸಲಾದ ‘ಪ್ರವಾಸಿ ಭಾರತೀಯ ದಿವಸ’ ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಪರವಾಗಿ ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಭಾಗವಹಿಸಿದ್ದಾರೆ.

ಪ್ರಪಂಚದ ಅನೇಕ ದೇಶಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಅನಿವಾಸಿ ಭಾರತೀಯರನ್ನು ಗುರುತಿಸಿ ಭಾರತದ ರಾಷ್ಟ್ರಪತಿಗಳು ನೀಡುವ ಅತ್ಯುನ್ನತ ಗೌರವವನ್ನು ನೀಡಲಾಗುತ್ತಿದ್ದು, ಈ ಬಾರಿ ಕಲಬುರಗಿ ಮೂಲದ ಸುಮಾರು 40 ವರ್ಷಗಳಿಂದ ಸೌದಿ ಅರೇಬಿಯಾ ದೇಶದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಡಾ.ಸೈಯದ್ ಅನ್ವರ್ ಖುರ್ಷಿದ್ ಅವರಿಗೆ ಪ್ರವಾಸಿ ಭಾರತೀಯ ಸಮ್ಮಾನ್ ಪ್ರಶಸ್ತಿಯನ್ನು ನೀಡಲಾಯಿತು.

ಈ ವರ್ಷದ ಪ್ರವಾಸಿ ಭಾರತೀಯ ಸಮ್ಮಾನ್ ಪಡೆದ 27 ಜನರಲ್ಲಿ ಡಾ.ಖುರ್ಷಿದ್ ಕೂಡ ಒಬ್ಬರು ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News