ಕೋವಿಡ್ ನಂತರ ಆರೋಗ್ಯದಲ್ಲಿ ಏರುಪೇರು, ಸಂಶೋಧನೆ ಅಗತ್ಯ : ಆರಗ ಜ್ಞಾನೇಂದ್ರ

Update: 2024-02-26 17:42 GMT

ಬೆಂಗಳೂರು : ಕೋವಿಡ್ ಸೋಂಕಿನ ಬಳಿಕ ಜನರ ಆರೋಗ್ಯದಲ್ಲಿ ಏರುಪೇರಾಗಿದ್ದು, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಶೋಧನೆಗೆ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಹಿರಿಯ ಶಾಸಕ ಆರಗ ಜ್ಞಾನೇಂದ್ರ ಮನವಿ ಮಾಡಿದ್ದಾರೆ.

ಸೋಮವಾರ ವಿಧಾನಸಭೆಯಲ್ಲಿ ಸ್ಪೀಕರ್ ಯು.ಟಿ.ಖಾದರ್ ಮಂಡಿಸಿದ ಸಂತಾಪ ಸೂಚನಾ ನಿರ್ಣಯವನ್ನು ಬೆಂಬಲಿಸಿ ಮಾತನಾಡಿದ ಅವರು, ಕೋವಿಡ್ ಬಳಿಕ ಚಿಕ್ಕ ವಯಸ್ಸಿನಲ್ಲೇ ಯುವಕ- ಯುವತಿಯರು ಮೃತಪಡುತ್ತಿದ್ದಾರೆ. ಈ ಬಗ್ಗೆ ಸಂಶೋಧನೆ ನಡೆಸುವ ಅಗತ್ಯವಿದೆ. ಎಲ್ಲ ಆಸ್ಪತ್ರೆಗಳಲ್ಲಿ ಪರೀಕ್ಷೆ ನಡೆಸಲು ಕಟ್ಟುನಿಟ್ಟಿನ ಸೂಚನೆ ನೀಡಬೇಕು ಎಂದು ಸಲಹೆ ನೀಡಿದರು.

ಕಿರಿಯ ವಯಸ್ಸಿನಲ್ಲಿ ಸಾವು ಹೆಚ್ಚಾಗುತ್ತಿರುವ ಬಗ್ಗೆ ವೈದ್ಯಕೀಯ ತಜ್ಞರೊಂದಿಗೆ ಸಮಾಲೋಚಿಸಿ ಈ ಬಗ್ಗೆ ಅಧ್ಯಯನ ನಡೆಸುವ ಅಗತ್ಯವಿದೆ. ಆ ಮೂಲಕ ಪರಿಹಾರ ಕಂಡುಕೊಂಡು ಕಿರಿಯ ವಯಸ್ಸಿನಲ್ಲಿ ನಿಧನರಾಗುವುದನ್ನು ತಪ್ಪಿಸಬಹುದಾಗಿದೆ ಎಂದೂ ಅವರು ಉಲ್ಲೇಖಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News