ರಾಜ್ಯದಲ್ಲಿ ಸಿಎಂ ಬದಲಾವಣೆಯ ವಾತಾವರಣ ಇಲ್ಲ : ಜಿ.ಪರಮೇಶ್ವರ್

Update: 2024-07-31 12:47 GMT

ಹುಬ್ಬಳ್ಳಿ : ಸದ್ಯಕ್ಕೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಾತಾವರಣವಿಲ್ಲ. ಸಿದ್ದರಾಮಯ್ಯ ಸಿಎಂ ಇದ್ದಾರೆ ಎಂದು ಗೃಹ ಸಚಿವ ಡಾಜಿ.ಪರಮೇಶ್ವರ್ ಹೇಳಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಸನ್ಯಾಸಿಗಳು ಅಲ್ಲ. ಆದರೆ, ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಉಳಿದಿಲ್ಲ. ಈ ರೀತಿಯ ವಾತಾವರಣವೂ ಇಲ್ಲ. ಉತ್ತಮ ಸರಕಾರವಿದ್ದು, ಜನರ ಸಂಕಷ್ಟಗಳಿಗೆ ಸ್ಪಂದಿಸುತ್ತಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಕಾನೂನು ವ್ಯವಸ್ಥೆ ವ್ಯವಸ್ಥಿತವಾಗಿದೆ. ಯಾವುದೇ ಸಂದರ್ಭದಲ್ಲಿ ಕೈಮೀರಿ ಹೋಗಿಲ್ಲ. ಸ್ವಾಭಾವಿಕವಾಗಿ ಕೆಲ ಘಟನೆಗಳು ನಡೆಯುತ್ತವೆ. ಕೊಲೆ, ಕಳ್ಳತನ, ಡ್ರಗ್ಸ್ ದಂಧೆ ಆಗಿರುವುದು ಎಲ್ಲವೂ ನಿಜ. ಎಷ್ಟರ ಮಟ್ಟಿಗೆ ಇದೆ ಎನ್ನುವುದು ಮುಖ್ಯ. ಇದನ್ನು ನಮ್ಮ ಪೊಲೀಸ್ ಇಲಾಖೆ ನಿಯಂತ್ರಣ ಮಾಡಲಿದೆ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News