ಬೆಂಗಳೂರಿನಲ್ಲಿ ಧಾರಾಕಾರ ಮಳೆಯಿಂದ ಆವಾಂತರ ಸೃಷ್ಟಿ

Update: 2024-07-31 16:08 GMT

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಬುಧವಾರದಂದು ನಗರದಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ನಗರದ ರಸ್ತೆಗಳು ಜಲಾವೃತಗೊಂಡು ಅವಾಂತರ ಸೃಷ್ಟಿಯಾಗಿತ್ತು.

ನಗರದ ವಿಜಯನಗರ, ಕೆಆರ್ ಮಾರುಕಟ್ಟೆ, ಗಾಂಧಿನಗರ, ರಾಜಾಜಿನಗರ, ರಾಜರಾಜೇಶ್ವರಿ ನಗರ, ಜಾಲಹಳ್ಳಿ ಸೇರಿ ಹಲವೆಡೆ ಧಾರಾಕಾರ ಮಳೆಯಾಗಿದೆ. ಬೆಳಿಗ್ಗೆಯಿಂದ ನಗರದಲ್ಲಿ ಮೋಡ ಕವಿದ ವಾತಾವರಣವಿತ್ತು. ಸಂಜೆಯಾಗುತ್ತಿದ್ದಂತೆ ನಗರದ ಹಲವೆಡೆ ಮಳೆಯಾಗಿದೆ. ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತಗೊಂಡಿದ್ದು ವಾಹನ ಸವಾರರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.

ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಮಳೆರಾಯ ಅಡೆಚಣೆ ಉಂಟು ಮಾಡಿದ್ದು ಮೆಟ್ರೋ ಪಿಲ್ಲರ್ ಹಾಗೂ ಅಂಗಡಿ ಮುಗ್ಗಟ್ಟುಗಳ ಆಶ್ರಯವನ್ನು ಪಡೆದು ಸವಾರರು ನಿಂತಿರುವ ದೃಶ್ಯಗಳು ಕಂಡು ಬಂದಿತ್ತು. ಅರ್ಧ ಗಂಟೆಯಿಂದ ಅಧಿಕ ಮಳೆ ಬಿದ್ದಿದ್ದು, ರಸ್ತೆಯಲ್ಲಿ ಗುಂಡಿಗಳು ಕಾಣದೆ ಸವಾರರು ಕಿರಿಕಿರಿಯನ್ನು ಅನುಭವಿಸಿದರು. ಇದರಿಂದಾಗಿ ಅಲ್ಲಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News